2:39 AM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಅಸ್ಮಿತಾಯ್ ಕೊಂಕಣಿ ಚಿತ್ರದ ಟ್ರೈಲರ್ ಬಿಡುಗಡೆ: ಸೆಪ್ಟೆಂಬರ್ 15ರಂದು ಬೆಳ್ಳಿತೆರೆಗೆ

18/08/2023, 13:37

ಮಂಗಳೂರು(reporterkarnataka.com): ಮಾಂಡ್ ಸೊಭಾಣ್ ನಿರ್ಮಾಣದ ಕೊಂಕಣಿ ಚಲನಚಿತ್ರ ಅಸ್ಮಿತಾಯ್ ಇದರ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ನಗರದ ಮಂಗಳೂರಿನ ಭಾರತ್ ಸಿನೆಮಾದಲ್ಲಿ ನಡೆಯಿತು. ಅನಿವಾಸಿ ಉದ್ಯಮಿ ರೊನಾಲ್ಡ್ ಪಿಂಟೊ ಇವರು ಡೋಲು ಬಾರಿಸುವ ಮೂಲಕ ಟ್ರೈಲರ್ ಬಿಡುಗಡೆ ಮಾಡಿದರು.
ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂತೇರೊ ಚಿತ್ರದ ಪೋಸ್ಟರ್ ಅನ್ನು ಹಾಗೂ ಇನ್ನೋರ್ವ ಕುಕ್ಕುಟ ಕ್ಷೇತ್ರದ ಮುಂಚೂಣಿ ಉದ್ಯಮ ಐಡಿಯಲ್ ಚಿಕನ್ಸ್ ಇದರ ಮಾಲಕ ವಿನ್ಸೆಂಟ್ ಕುಟಿನ್ಹಾ ಇವರು ಪ್ರೀಮಿಯರ್ ಪ್ರದರ್ಶನದ ಟಿಕೇಟ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು.


ನಿರ್ಮಾಪಕ ಲುವಿಸ್ ಜೆ. ಪಿಂಟೊ ಪ್ರಸ್ತಾವಿಕವಾಗಿ ಮಾತನಾಡಿ, ‘’ಅದ್ದೂರಿಯಾಗಿ ನಿರ್ಮಾಣವಾದ ಚಿತ್ರದಲ್ಲಿ ಸಿನೆಮಾಕ್ಕೆ ಪೂರಕವಾದ ಎಲ್ಲಾ ಅಂಶಗಳಿದ್ದರೂ ಕೇವಲ ಸಿನೆಮಾವಾಗಿ ನಾವಿದನ್ನು ನಿರ್ಮಿಸಿಲ್ಲ. ಕೊಂಕಣಿ ಅಸ್ಮಿತೆಯ ಬಗ್ಗೆ ಜನರಿಗೆ ಮನವರಿಕೆ ಮಾಡಲು ‘ಚಲನಚಿತ್ರದಿಂದ ಚಳುವಳಿವರೆಗೆ’ ಎಂಬ ಉದ್ದೇಶವಿಟ್ಟು ಕೆಲಸ ಮಾಡಿದ್ದೇವೆ’’ ಎಂದು ಮಾಹಿತಿ ನೀಡಿದರು.
ಪ್ರೇಮದ ಮೂಲಕ, ಕೊಂಕಣಿ ಅಸ್ಮಿತೆಯ ಹುಡುಕಾಟದ ಬಗ್ಗೆ ಎರಿಕ್ ಒಝೇರಿಯೊ ಬರೆದ ಮೂಲಕತೆಯನ್ನು, ಜೊಯೆಲ್ ಪಿರೇರಾ ಚಿತ್ರಕತೆಯಾಗಿ ರಚಿಸಿದ ಈ ಸಿನೆಮಾಕ್ಕೆ ವಿಲಾಸ್ ರತ್ನಾಕರ್ ನಿರ್ದೇಶನ ನೀಡಿದ್ದಾರೆ. ಬಾಲರಾಜ ಗೌಡ ಸಿನೆಮಾಟೊಗ್ರಾಫಿ, ಆಲ್ವಿನ್ ಫೆರ್ನಾಂಡಿಸ್, ಕ್ಯಾಜಿಟನ್ ಡಾಯಸ್, ಜೊಯೆಲ್ ಪಿರೇರಾ, ಎರಿಕ್ ಒಝೇರಿಯೊ ಸಂಗೀತ ನೀಡಿದ್ದಾರೆ. ಡೆನಿಸ್ ಮೊಂತೇರೊ, ಆಶ್ವಿನ್ ಡಿಕೊಸ್ತಾ, ವೆನ್ಸಿಟಾ ಡಾಯಸ್, ಸಾಯಿ ಪನಂದಿಕಾರ್, ಪ್ರಿನ್ಸ್ ಜೇಕಬ್, ನೆಲ್ಲು ಪೆರ್ಮನ್ನೂರ್, ಸ್ಟ್ಯಾನಿ ಆಲ್ವಾರಿಸ್, ಗೌರೀಶ್ ವೆರ್ಣೆಕರ್, ಸುನೀಲ್ ಸಿದ್ದಿ ಮತ್ತಿತರರು ಪ್ರಮುಖ ಭೂಮಿಕೆಯಲ್ಲಿರುವ ಈ ಸಿನೆಮಾವು ಸೆಪ್ಟೆಂಬರ್ 15 ರಿಂದ ದಕ್ಷಿಣ ಕನ್ನಡ, ಉಡುಪಿಯ ಹಲವು ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳಲಿದೆ. ಮುಂದಿನ ದಿನಗಳಲ್ಲಿ ದೇಶ ಮತ್ತು ವಿದೇಶದ ಇತರೆಡೆ ಪ್ರದರ್ಶನಗೊಳ್ಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು