5:29 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಆಸ್ಪತ್ರೆ ಸೇರಿದ್ದ ಮಂದಾರ ತ್ಯಾಜ್ಯ ದುರಂತ ಸಂತ್ರಸ್ತೆ ವಿಧಿವಶ: ಮೃತರ ಸಂಖ್ಯೆ 3ಕ್ಕೆ ಏರಿಕೆ: ಧಕ್ಕದ ಪರಿಹಾರ ದುಃಖದ ಜೀವನ ! 

17/12/2021, 13:51

ಮಂಗಳೂರು(reporterkarnataka.com): ಬದುಕು ಕಟ್ಟಿಕೊಂಡ ಫಲವತ್ತಾದ ಹಸಿರು ನೆಲವನ್ನು ತ್ಯಾಜ್ಯ ರಾಶಿ ನುಂಗಿದ ಬಳಿಕ ಸರ್ವಸ್ವವನ್ನೂ ಕಳೆದುಕೊಂಡು ಆಸ್ಪತ್ರೆ ಸೇರಿದವರ ಪೈಕಿ ಪಾರಂಪರಿಕ ಮನೆತನಕ್ಕೆ ಸೇರಿದ ಹಿರಿಯ ಜೀವ ರಾಧಾ ಭಟ್ ಅವರು ವಿಧಿವಶರಾಗಿದ್ದಾರೆ. ಇದರೊಂದಿಗೆ ಮಂದಾರ ಸಂತ್ರಸ್ತರಲ್ಲಿ ಮೃತರ ಸಂಖ್ಯೆ 3ಕ್ಕೇರಿದೆ. ಇನ್ನೊಬ್ಬ ಸಂತ್ರಸ್ತರು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.

ಖ್ಯಾತ ಸಾಹಿತಿ ದಿವಂಗತ ಮಂದಾರ ಕೇಶವ ಭಟ್ ಅವರ ಪಾರಂಪರಿಕ ಮನೆತನಕ್ಕೆ ಸೇರಿದ ದಿವಂಗತ ಮಾಧವ ಭಟ್ ಅವರ ಪತ್ನಿ ರಾಧಾ ಭಟ್ ಅವರು ತ್ಯಾಜ್ಯ ದುರಂತದಿಂದ ಸರ್ವಸ್ವವನ್ನೂ ಕಳೆದುಕೊಂಡಿದ್ದರು. ಮಧ್ಯಂತರ ಪರಿಹಾರ ಬಿಟ್ಟರೆ ಸಂತ್ರಸ್ತರಿಗೆ ಜಿಲ್ಲಾಡಳಿತವಾಗಲಿ, ರಾಜ್ಯ ಸರಕಾರವಾಗಲೀ ಯಾವುದೇ ವ್ಯವಸ್ಥೆ ಮಾಡಿಲ್ಲ. ತ್ಯಾಜ್ಯ ದುರಂತದಿಂದ ಹುಟ್ಟಿ ಬೆಳೆದ ನೆಲ ಜಲವನ್ನು ಕಳೆದುಕೊಂಡ ರಾಧಾ ಭಟ್ ಅವರು ತೀವ್ರ ಆಘಾತಕ್ಕೀಡಾಗಿದ್ದರು. 1.48 ಎಕರೆ ಜಾಗವನ್ನು ಅವರು ಕಳೆದು ಕೊಂಡಿದ್ದರು. ಇದರಿಂದ ಅವರ ಆರೋಗ್ಯ ಕೆಡಲಾರಂಭಿಸಿತು. ಇತ್ತೀಚೆಗೆ ಕೋಮಾ ಸ್ಥಿತಿಗೆ ತಲುಪಿದ ಅವರನ್ನು ನಗರದ ಕೊಲಾಸೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ತ್ಯಾಜ್ಯ ದುರಂತಕ್ಕೆ ಕೆಲವು ವರ್ಷಗಳ ಮುನ್ನ  2004-05ರಲ್ಲಿ ಪಚ್ಚನಾಡಿ ಡಂಪಿಂಗ್ ಯಾರ್ಡ್ ಗೆ ಅವರ 12.71 ಎಕರೆ ಜಾಗವನ್ನು ಮಂಗಳೂರು ಮಹಾನಗರಪಾಲಿಕೆ ಸ್ವಾಧೀನಪಡಿಸಿಕೊಂಡಿತ್ತು. ಆದರೆ ಅಂದು ನಿಗದಿಪಡಿಸಿದ ದರವನ್ನು ಪಾಲಿಕೆ ನೀಡಿಲ್ಲ ಎಂಬ ಆರೋಪ ಇದೆ. ಈ ಕುರಿತು ಪ್ರಕರಣ ರಾಜ್ಯ ಹೈಕೋರ್ಟ್ ನಲ್ಲಿದೆ. ಇದಲ್ಲದೆ 15 ಸೆಂಟ್ಸ್ ಕನ್ವರ್ಸನ್ ಭೂಮಿ, ಒಂದು ನಾಗಬನ, ದೈವಸ್ಥಾನ, ಪಾರಂಪರಿಕ ಮನೆ ಹಾಗೂ ಇತರ ಎರಡು ಮನೆ, ಫಲಭರಿತ ಅಡಿಕೆ, ಒಂದು ಸಾವಿರಕ್ಕೂ ಹೆಚ್ಚು ಕರಿಮೆಣಸಿನ ಬಳ್ಳಿ, 2 ಕೆರೆ, ಒಂದು ಬಾವಿ, ಪಂಪ್ ಸೆಟ್, ಅರಣ್ಯ ಉತ್ಪನ್ನ 10 ಲಕ್ಷ ಟನ್ ಕಸದೊಳಗೆ ಹುದುಗಿ ಹೋಗಿದೆ.

ಇನ್ನು ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಇನ್ನೊಬ್ಬ ಸಂತ್ರಸ್ತರಾದ ಸೋಮಪ್ಪ ಮೊಯ್ಲಿ ಅವರು ಅರೆ ಪ್ರಜ್ಞಾವಸ್ಥೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಅವರು ಬ್ರೈನ್ ಸ್ಟ್ರೋಕ್ ಗೆ ಗುರಿಯಾಗಿದ್ದಾರೆ.

ಸ್ಟ್ರೋಕ್ ನಿಂದ ಬಿದ್ದುಬಿಟ್ಟು ತಲೆಗೆ ಏಟಾಗಿದೆ. ಮನೆ ಮಠ ಕಳೆದುಕೊಂಡ ದುಃಖದಲ್ಲೇ ಅವರು ಅನಾರೋಗ್ಯಕ್ಕೊಳಗಾಗಿದ್ದಾರೆ. ಮಂದಾರ ಸಂತ್ರಸ್ತರೆಲ್ಲ 

ಕುಲಶೇಖರ ಬಳಿಯ ಗೃಹ ನಿರ್ಮಾಣ ಮಂಡಳಿಯ ಫ್ಲ್ಯಾಟ್ ನಲ್ಲಿ ಜೀವನ ನಡೆಸುತ್ತಿದ್ದಾರೆ. ಫ್ಲ್ಯಾಟ್ ನ್ನು ಸಂತ್ರಸ್ತರ ಹೆಸರಿಗೆ ಮಾಡಿಕೊಡುವುದಾಗಿ ಆರಂಭದಲ್ಲಿ ಜಿಲ್ಲಾಡಳಿತ ಆಶ್ವಾಸನೆ ನೀಡಿತ್ತು. ಆದರೆ ದುರಂತ ನಡೆದು 2 ವರ್ಷ ಕಳೆದರೂ ಸಂತ್ರಸ್ತರ ಹೆಸರಿಗೆ ಫ್ಲ್ಯಾಟ್ ಧಕ್ಕಿಲ್ಲ. ಜಿಲ್ಲಾಡಳಿತ, ರಾಜ್ಯ ಸರಕಾರ ಇನ್ನಾದರೂ ಎಚ್ಚೆತ್ತುಕೊಳ್ಳುವ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು