4:09 AM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಆಸ್ಪತ್ರೆಗೆ ಕಾಂಗ್ರೆಸ್ ನಾಯಕರ ದಂಡು: ಆಸ್ಕರ್ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ, ಡಿಕೆಶಿ, ಸಲೀಂ ಅಹಮ್ಮದ್

22/07/2021, 19:44

ಮಂಗಳೂರು(reporterkarnataka news): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗುರುವಾರ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರ ಮಾಜಿ ಸಚಿವ, ರಾಜ್ಯಸಭೆ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿದರು.


ಗುರುವಾರ ಸಂಜೆ 5.10ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಿದ್ದರಾಮಯ್ಯ ಅವರುಮಂಗಳೂರಿಗೆ ಆಗಮಿಸಿದರು. ಸಂಜೆ 6.10ಕ್ಕೆ ಮಂಗಳೂರಿಗೆ ಆಗಮಿಸುವ ಅವರು ನಂತರ ಪಕ್ಷದ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಸಿದ್ದರಾಮಯ್ಯ ಜತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿರಾದ ಬಿ.ರಮಾನಾಥ ರೈ, ಯು.ಟಿ. ಖಾದರ್, ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಜೆ. ಆರ್. ಲೋಬೊ, ಮೊಯ್ದೀನ್ ಬಾವಾ, ಐವನ್ ಡಿಸೋಜ, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ ಮುಂತಾದವರು ಉಪಸ್ಥಿತರಿದ್ದರು.

 ಆಸ್ಕರ್ ಫೆರ್ನಾಂಡಿಸ್ ಅವರು ಯೋಗಾಭ್ಯಾಸದ ವೇಳೆ ತನ್ನ ಅತ್ತಾವರದ ಫ್ಲ್ಯಾಟ್ ನಲ್ಲಿ  ಬಿದ್ದು ಗಾಯಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು