6:18 AM Sunday9 - November 2025
ಬ್ರೇಕಿಂಗ್ ನ್ಯೂಸ್
ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌…

ಇತ್ತೀಚಿನ ಸುದ್ದಿ

ಆಸ್ಪತ್ರೆಯಲ್ಲಿ ನಾಪತ್ತೆಯಾದ ಪುಟ್ಟ ಬಾಲಕಿ: ಸಿಡಿಪಿಓ ಅಧಿಕಾರಿಗಳ ಕಾರ್ಯಾಚರಣೆಯಿಂದ ಕೆಲವೇ ತಾಸಿನಲ್ಲಿ ಪೋಷಕರ ಮಡಿಲಿಗೆ

07/11/2024, 15:05

ಮೋಹನ್ ನಂಜಗೂಡು ಮೈಸೂರು

info.reporterkarnataka@gmail.com

ತಾಯಿ ಮತ್ತು ಅಜ್ಜಿಯ ಜೊತೆ ಆಸ್ಪತ್ರೆಗೆ ಧಾವಿಸಿದ್ದ ಪುಟ್ಟ ಬಾಲಕಿ ನಾಪತ್ತೆಯಾಗಿದ್ದ ಕೆಲವೇ ಗಂಟೆಗಳಲ್ಲಿ ಸಿ ಡಿ ಪಿ ಓ ಭವ್ಯಶ್ರೀ ಮತ್ತು ಸಿಬ್ಬಂದಿಗಳ ಜಾಗೃತಿಯಿಂದ ಪೋಷಕರ ಕೈ ಸೇರಿ ಪೋಷಕರಲ್ಲಿ ಕಾಡಿದ್ದ ಆತಂಕ ದೂರವಾದ ಘಟನೆ ನಂಜನಗೂಡಿನಲ್ಲಿ ನಡೆದಿದೆ
ನಂಜನಗೂಡು ನಗರದ ನೀಲಕಂಠ ನಗರ ಬಡಾವಣೆಯ ಯೋಗೇಶ್ ಎಂಬುವರ ಪತ್ನಿ ಸೌಭಾಗ್ಯ ತನ್ನ ತಾಯಿ ಮತ್ತು ನಾಲ್ಕು ವರ್ಷದ ಪುಟ್ಟ ಮಗುವಿನ ಜೊತೆಗೂಡಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಸಲುವಾಗಿ ದಾವಿಸಿದ್ದರು.


ತನ್ನ ತಾಯಿಯ ಜೊತೆ ಸೌಭಾಗ್ಯ ವೈದ್ಯರ ಬಳಿ ತೆರಳಿದ ಸಂದರ್ಭ ಹೊರ ಭಾಗದಲ್ಲಿ ನಿಂತಿದ್ದ ಪುಟ್ಟ ಬಾಲಕಿ ತಬ್ಬಿಬ್ಬಾಗಿ ಆಸ್ಪತ್ರೆಯಿಂದ ಹೊರನಡೆದಿದೆ.
ತನ್ನ ಅಜ್ಜಿ ಮತ್ತು ತಾಯಿ ನನ್ನನ್ನು ಬಿಟ್ಟು ಹೋಗಿದ್ದಾರೆ ಎಂಬ ಆತಂಕದಲ್ಲಿ ಪುಟ್ಟ ಬಾಲಕಿ ಆಸ್ಪತ್ರೆಯಿಂದ ಸರಿಸುಮಾರು ಒಂದು ಕಿಲೋಮೀಟರ್ ದೂರದ ಹುಲ್ಲಹಳ್ಳಿ ಮುಖ್ಯರಸ್ತೆಯ ಕೆನರಾ ಬ್ಯಾಂಕ್ ಬಳಿಯ ಅಂಗಡಿ ಮುಂಭಾಗದಲ್ಲಿ ತಾಯಿ ಮತ್ತು ಅಜ್ಜಿಯ ಹುಡುಕಾಟದಲ್ಲಿ ತಲ್ಲಿನನಾಗಿದ್ದಳು. ನಾಲ್ಕು ವರ್ಷದ ಪುಟ್ಟ ಬಾಲಕಿಯ ಚಲನವಲನವನ್ನು ನೋಡಿದ ಅಂಗಡಿಯ ಮಾಲೀಕರು ನಗರದ ಸಿಡಿಪಿಓ ಭವ್ಯಶ್ರೀ ರವರ ದೂರವಾಣಿಗೆ ಕರೆ ಮಾಡಿ ವಿಚಾರ ಮುಟ್ಟಿಸಿದ್ದು ಕೂಡಲೇ ಧಾವಿಸಿದ ಸಿಡಿಪಿಓ ಭವ್ಯಶ್ರೀ ಮತ್ತು ಸಾಂತ್ವನ ಇಲಾಖೆಯ ಸಾವಿತ್ರಿ ನಾಲ್ಕು ವರ್ಷದ ಪುಟ್ಟ ಬಾಲಕಿಯನ್ನು ವಶಕ್ಕೆ ಪಡೆದು ಸರಿ ಸುಮಾರು ಎರಡು ಗಂಟೆಗಳ ಕಾಲ ಮಗುವಿನ ಪೋಷಕರ ಹುಡುಕಾಟದಲ್ಲಿ ತೊಡಗಿದ್ದಾರೆ. ನಂತರ ಮಗು ಬಂದ ದಾರಿಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಧಾವಿಸಿದ ಬಳಿಕ ಮಗು ನೇರವಾಗಿ ತನ್ನ ಅಜ್ಜಿಯ ಬಳಿ ತೆರಳಿದೆ. ಪುಟ್ಟ ಬಾಲಕಿಗಾಗಿ ಹುಡುಕಾಟ ನಡೆಸುತ್ತಿದ್ದ ಪೋಷಕರು ನಿರಾಳವಾಗಿ ಸಿಡಿಪಿಓ ಮತ್ತು ಸಿಬ್ಬಂದಿಗಳಿಗೆ ಹ್ಯಾಟ್ಸಾಫ್ ಹೇಳಿದ್ದಾರೆ. ಒಟ್ಟಾರೆ ಸಿಡಿಪಿಓ ಇಲಾಖೆ ಅಧಿಕಾರಿಗಳ ಜಾಗೃತಿಯಿಂದ ಪುಟ್ಟ ಬಾಲಕಿ ತಾಯಿಯ ಮಡಿಲು ಸೇರಿದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು