6:22 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಆಸ್ಪತ್ರೆಯಲ್ಲಿ ನಾಪತ್ತೆಯಾದ ಪುಟ್ಟ ಬಾಲಕಿ: ಸಿಡಿಪಿಓ ಅಧಿಕಾರಿಗಳ ಕಾರ್ಯಾಚರಣೆಯಿಂದ ಕೆಲವೇ ತಾಸಿನಲ್ಲಿ ಪೋಷಕರ ಮಡಿಲಿಗೆ

07/11/2024, 15:05

ಮೋಹನ್ ನಂಜಗೂಡು ಮೈಸೂರು

info.reporterkarnataka@gmail.com

ತಾಯಿ ಮತ್ತು ಅಜ್ಜಿಯ ಜೊತೆ ಆಸ್ಪತ್ರೆಗೆ ಧಾವಿಸಿದ್ದ ಪುಟ್ಟ ಬಾಲಕಿ ನಾಪತ್ತೆಯಾಗಿದ್ದ ಕೆಲವೇ ಗಂಟೆಗಳಲ್ಲಿ ಸಿ ಡಿ ಪಿ ಓ ಭವ್ಯಶ್ರೀ ಮತ್ತು ಸಿಬ್ಬಂದಿಗಳ ಜಾಗೃತಿಯಿಂದ ಪೋಷಕರ ಕೈ ಸೇರಿ ಪೋಷಕರಲ್ಲಿ ಕಾಡಿದ್ದ ಆತಂಕ ದೂರವಾದ ಘಟನೆ ನಂಜನಗೂಡಿನಲ್ಲಿ ನಡೆದಿದೆ
ನಂಜನಗೂಡು ನಗರದ ನೀಲಕಂಠ ನಗರ ಬಡಾವಣೆಯ ಯೋಗೇಶ್ ಎಂಬುವರ ಪತ್ನಿ ಸೌಭಾಗ್ಯ ತನ್ನ ತಾಯಿ ಮತ್ತು ನಾಲ್ಕು ವರ್ಷದ ಪುಟ್ಟ ಮಗುವಿನ ಜೊತೆಗೂಡಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಸಲುವಾಗಿ ದಾವಿಸಿದ್ದರು.


ತನ್ನ ತಾಯಿಯ ಜೊತೆ ಸೌಭಾಗ್ಯ ವೈದ್ಯರ ಬಳಿ ತೆರಳಿದ ಸಂದರ್ಭ ಹೊರ ಭಾಗದಲ್ಲಿ ನಿಂತಿದ್ದ ಪುಟ್ಟ ಬಾಲಕಿ ತಬ್ಬಿಬ್ಬಾಗಿ ಆಸ್ಪತ್ರೆಯಿಂದ ಹೊರನಡೆದಿದೆ.
ತನ್ನ ಅಜ್ಜಿ ಮತ್ತು ತಾಯಿ ನನ್ನನ್ನು ಬಿಟ್ಟು ಹೋಗಿದ್ದಾರೆ ಎಂಬ ಆತಂಕದಲ್ಲಿ ಪುಟ್ಟ ಬಾಲಕಿ ಆಸ್ಪತ್ರೆಯಿಂದ ಸರಿಸುಮಾರು ಒಂದು ಕಿಲೋಮೀಟರ್ ದೂರದ ಹುಲ್ಲಹಳ್ಳಿ ಮುಖ್ಯರಸ್ತೆಯ ಕೆನರಾ ಬ್ಯಾಂಕ್ ಬಳಿಯ ಅಂಗಡಿ ಮುಂಭಾಗದಲ್ಲಿ ತಾಯಿ ಮತ್ತು ಅಜ್ಜಿಯ ಹುಡುಕಾಟದಲ್ಲಿ ತಲ್ಲಿನನಾಗಿದ್ದಳು. ನಾಲ್ಕು ವರ್ಷದ ಪುಟ್ಟ ಬಾಲಕಿಯ ಚಲನವಲನವನ್ನು ನೋಡಿದ ಅಂಗಡಿಯ ಮಾಲೀಕರು ನಗರದ ಸಿಡಿಪಿಓ ಭವ್ಯಶ್ರೀ ರವರ ದೂರವಾಣಿಗೆ ಕರೆ ಮಾಡಿ ವಿಚಾರ ಮುಟ್ಟಿಸಿದ್ದು ಕೂಡಲೇ ಧಾವಿಸಿದ ಸಿಡಿಪಿಓ ಭವ್ಯಶ್ರೀ ಮತ್ತು ಸಾಂತ್ವನ ಇಲಾಖೆಯ ಸಾವಿತ್ರಿ ನಾಲ್ಕು ವರ್ಷದ ಪುಟ್ಟ ಬಾಲಕಿಯನ್ನು ವಶಕ್ಕೆ ಪಡೆದು ಸರಿ ಸುಮಾರು ಎರಡು ಗಂಟೆಗಳ ಕಾಲ ಮಗುವಿನ ಪೋಷಕರ ಹುಡುಕಾಟದಲ್ಲಿ ತೊಡಗಿದ್ದಾರೆ. ನಂತರ ಮಗು ಬಂದ ದಾರಿಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಧಾವಿಸಿದ ಬಳಿಕ ಮಗು ನೇರವಾಗಿ ತನ್ನ ಅಜ್ಜಿಯ ಬಳಿ ತೆರಳಿದೆ. ಪುಟ್ಟ ಬಾಲಕಿಗಾಗಿ ಹುಡುಕಾಟ ನಡೆಸುತ್ತಿದ್ದ ಪೋಷಕರು ನಿರಾಳವಾಗಿ ಸಿಡಿಪಿಓ ಮತ್ತು ಸಿಬ್ಬಂದಿಗಳಿಗೆ ಹ್ಯಾಟ್ಸಾಫ್ ಹೇಳಿದ್ದಾರೆ. ಒಟ್ಟಾರೆ ಸಿಡಿಪಿಓ ಇಲಾಖೆ ಅಧಿಕಾರಿಗಳ ಜಾಗೃತಿಯಿಂದ ಪುಟ್ಟ ಬಾಲಕಿ ತಾಯಿಯ ಮಡಿಲು ಸೇರಿದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು