9:03 PM Saturday28 - February 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಆಸ್ಪತ್ರೆಯಲ್ಲಿ ನಾಪತ್ತೆಯಾದ ಪುಟ್ಟ ಬಾಲಕಿ: ಸಿಡಿಪಿಓ ಅಧಿಕಾರಿಗಳ ಕಾರ್ಯಾಚರಣೆಯಿಂದ ಕೆಲವೇ ತಾಸಿನಲ್ಲಿ ಪೋಷಕರ ಮಡಿಲಿಗೆ

07/11/2024, 15:05

ಮೋಹನ್ ನಂಜಗೂಡು ಮೈಸೂರು

info.reporterkarnataka@gmail.com

ತಾಯಿ ಮತ್ತು ಅಜ್ಜಿಯ ಜೊತೆ ಆಸ್ಪತ್ರೆಗೆ ಧಾವಿಸಿದ್ದ ಪುಟ್ಟ ಬಾಲಕಿ ನಾಪತ್ತೆಯಾಗಿದ್ದ ಕೆಲವೇ ಗಂಟೆಗಳಲ್ಲಿ ಸಿ ಡಿ ಪಿ ಓ ಭವ್ಯಶ್ರೀ ಮತ್ತು ಸಿಬ್ಬಂದಿಗಳ ಜಾಗೃತಿಯಿಂದ ಪೋಷಕರ ಕೈ ಸೇರಿ ಪೋಷಕರಲ್ಲಿ ಕಾಡಿದ್ದ ಆತಂಕ ದೂರವಾದ ಘಟನೆ ನಂಜನಗೂಡಿನಲ್ಲಿ ನಡೆದಿದೆ
ನಂಜನಗೂಡು ನಗರದ ನೀಲಕಂಠ ನಗರ ಬಡಾವಣೆಯ ಯೋಗೇಶ್ ಎಂಬುವರ ಪತ್ನಿ ಸೌಭಾಗ್ಯ ತನ್ನ ತಾಯಿ ಮತ್ತು ನಾಲ್ಕು ವರ್ಷದ ಪುಟ್ಟ ಮಗುವಿನ ಜೊತೆಗೂಡಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಸಲುವಾಗಿ ದಾವಿಸಿದ್ದರು.


ತನ್ನ ತಾಯಿಯ ಜೊತೆ ಸೌಭಾಗ್ಯ ವೈದ್ಯರ ಬಳಿ ತೆರಳಿದ ಸಂದರ್ಭ ಹೊರ ಭಾಗದಲ್ಲಿ ನಿಂತಿದ್ದ ಪುಟ್ಟ ಬಾಲಕಿ ತಬ್ಬಿಬ್ಬಾಗಿ ಆಸ್ಪತ್ರೆಯಿಂದ ಹೊರನಡೆದಿದೆ.
ತನ್ನ ಅಜ್ಜಿ ಮತ್ತು ತಾಯಿ ನನ್ನನ್ನು ಬಿಟ್ಟು ಹೋಗಿದ್ದಾರೆ ಎಂಬ ಆತಂಕದಲ್ಲಿ ಪುಟ್ಟ ಬಾಲಕಿ ಆಸ್ಪತ್ರೆಯಿಂದ ಸರಿಸುಮಾರು ಒಂದು ಕಿಲೋಮೀಟರ್ ದೂರದ ಹುಲ್ಲಹಳ್ಳಿ ಮುಖ್ಯರಸ್ತೆಯ ಕೆನರಾ ಬ್ಯಾಂಕ್ ಬಳಿಯ ಅಂಗಡಿ ಮುಂಭಾಗದಲ್ಲಿ ತಾಯಿ ಮತ್ತು ಅಜ್ಜಿಯ ಹುಡುಕಾಟದಲ್ಲಿ ತಲ್ಲಿನನಾಗಿದ್ದಳು. ನಾಲ್ಕು ವರ್ಷದ ಪುಟ್ಟ ಬಾಲಕಿಯ ಚಲನವಲನವನ್ನು ನೋಡಿದ ಅಂಗಡಿಯ ಮಾಲೀಕರು ನಗರದ ಸಿಡಿಪಿಓ ಭವ್ಯಶ್ರೀ ರವರ ದೂರವಾಣಿಗೆ ಕರೆ ಮಾಡಿ ವಿಚಾರ ಮುಟ್ಟಿಸಿದ್ದು ಕೂಡಲೇ ಧಾವಿಸಿದ ಸಿಡಿಪಿಓ ಭವ್ಯಶ್ರೀ ಮತ್ತು ಸಾಂತ್ವನ ಇಲಾಖೆಯ ಸಾವಿತ್ರಿ ನಾಲ್ಕು ವರ್ಷದ ಪುಟ್ಟ ಬಾಲಕಿಯನ್ನು ವಶಕ್ಕೆ ಪಡೆದು ಸರಿ ಸುಮಾರು ಎರಡು ಗಂಟೆಗಳ ಕಾಲ ಮಗುವಿನ ಪೋಷಕರ ಹುಡುಕಾಟದಲ್ಲಿ ತೊಡಗಿದ್ದಾರೆ. ನಂತರ ಮಗು ಬಂದ ದಾರಿಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಧಾವಿಸಿದ ಬಳಿಕ ಮಗು ನೇರವಾಗಿ ತನ್ನ ಅಜ್ಜಿಯ ಬಳಿ ತೆರಳಿದೆ. ಪುಟ್ಟ ಬಾಲಕಿಗಾಗಿ ಹುಡುಕಾಟ ನಡೆಸುತ್ತಿದ್ದ ಪೋಷಕರು ನಿರಾಳವಾಗಿ ಸಿಡಿಪಿಓ ಮತ್ತು ಸಿಬ್ಬಂದಿಗಳಿಗೆ ಹ್ಯಾಟ್ಸಾಫ್ ಹೇಳಿದ್ದಾರೆ. ಒಟ್ಟಾರೆ ಸಿಡಿಪಿಓ ಇಲಾಖೆ ಅಧಿಕಾರಿಗಳ ಜಾಗೃತಿಯಿಂದ ಪುಟ್ಟ ಬಾಲಕಿ ತಾಯಿಯ ಮಡಿಲು ಸೇರಿದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು