2:09 AM Wednesday15 - April 2026
ಬ್ರೇಕಿಂಗ್ ನ್ಯೂಸ್
Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ

ಇತ್ತೀಚಿನ ಸುದ್ದಿ

ಆಸ್ಪತ್ರೆಯಲ್ಲಿ ನಾಪತ್ತೆಯಾದ ಪುಟ್ಟ ಬಾಲಕಿ: ಸಿಡಿಪಿಓ ಅಧಿಕಾರಿಗಳ ಕಾರ್ಯಾಚರಣೆಯಿಂದ ಕೆಲವೇ ತಾಸಿನಲ್ಲಿ ಪೋಷಕರ ಮಡಿಲಿಗೆ

07/11/2024, 15:05

ಮೋಹನ್ ನಂಜಗೂಡು ಮೈಸೂರು

info.reporterkarnataka@gmail.com

ತಾಯಿ ಮತ್ತು ಅಜ್ಜಿಯ ಜೊತೆ ಆಸ್ಪತ್ರೆಗೆ ಧಾವಿಸಿದ್ದ ಪುಟ್ಟ ಬಾಲಕಿ ನಾಪತ್ತೆಯಾಗಿದ್ದ ಕೆಲವೇ ಗಂಟೆಗಳಲ್ಲಿ ಸಿ ಡಿ ಪಿ ಓ ಭವ್ಯಶ್ರೀ ಮತ್ತು ಸಿಬ್ಬಂದಿಗಳ ಜಾಗೃತಿಯಿಂದ ಪೋಷಕರ ಕೈ ಸೇರಿ ಪೋಷಕರಲ್ಲಿ ಕಾಡಿದ್ದ ಆತಂಕ ದೂರವಾದ ಘಟನೆ ನಂಜನಗೂಡಿನಲ್ಲಿ ನಡೆದಿದೆ
ನಂಜನಗೂಡು ನಗರದ ನೀಲಕಂಠ ನಗರ ಬಡಾವಣೆಯ ಯೋಗೇಶ್ ಎಂಬುವರ ಪತ್ನಿ ಸೌಭಾಗ್ಯ ತನ್ನ ತಾಯಿ ಮತ್ತು ನಾಲ್ಕು ವರ್ಷದ ಪುಟ್ಟ ಮಗುವಿನ ಜೊತೆಗೂಡಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಸಲುವಾಗಿ ದಾವಿಸಿದ್ದರು.


ತನ್ನ ತಾಯಿಯ ಜೊತೆ ಸೌಭಾಗ್ಯ ವೈದ್ಯರ ಬಳಿ ತೆರಳಿದ ಸಂದರ್ಭ ಹೊರ ಭಾಗದಲ್ಲಿ ನಿಂತಿದ್ದ ಪುಟ್ಟ ಬಾಲಕಿ ತಬ್ಬಿಬ್ಬಾಗಿ ಆಸ್ಪತ್ರೆಯಿಂದ ಹೊರನಡೆದಿದೆ.
ತನ್ನ ಅಜ್ಜಿ ಮತ್ತು ತಾಯಿ ನನ್ನನ್ನು ಬಿಟ್ಟು ಹೋಗಿದ್ದಾರೆ ಎಂಬ ಆತಂಕದಲ್ಲಿ ಪುಟ್ಟ ಬಾಲಕಿ ಆಸ್ಪತ್ರೆಯಿಂದ ಸರಿಸುಮಾರು ಒಂದು ಕಿಲೋಮೀಟರ್ ದೂರದ ಹುಲ್ಲಹಳ್ಳಿ ಮುಖ್ಯರಸ್ತೆಯ ಕೆನರಾ ಬ್ಯಾಂಕ್ ಬಳಿಯ ಅಂಗಡಿ ಮುಂಭಾಗದಲ್ಲಿ ತಾಯಿ ಮತ್ತು ಅಜ್ಜಿಯ ಹುಡುಕಾಟದಲ್ಲಿ ತಲ್ಲಿನನಾಗಿದ್ದಳು. ನಾಲ್ಕು ವರ್ಷದ ಪುಟ್ಟ ಬಾಲಕಿಯ ಚಲನವಲನವನ್ನು ನೋಡಿದ ಅಂಗಡಿಯ ಮಾಲೀಕರು ನಗರದ ಸಿಡಿಪಿಓ ಭವ್ಯಶ್ರೀ ರವರ ದೂರವಾಣಿಗೆ ಕರೆ ಮಾಡಿ ವಿಚಾರ ಮುಟ್ಟಿಸಿದ್ದು ಕೂಡಲೇ ಧಾವಿಸಿದ ಸಿಡಿಪಿಓ ಭವ್ಯಶ್ರೀ ಮತ್ತು ಸಾಂತ್ವನ ಇಲಾಖೆಯ ಸಾವಿತ್ರಿ ನಾಲ್ಕು ವರ್ಷದ ಪುಟ್ಟ ಬಾಲಕಿಯನ್ನು ವಶಕ್ಕೆ ಪಡೆದು ಸರಿ ಸುಮಾರು ಎರಡು ಗಂಟೆಗಳ ಕಾಲ ಮಗುವಿನ ಪೋಷಕರ ಹುಡುಕಾಟದಲ್ಲಿ ತೊಡಗಿದ್ದಾರೆ. ನಂತರ ಮಗು ಬಂದ ದಾರಿಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಧಾವಿಸಿದ ಬಳಿಕ ಮಗು ನೇರವಾಗಿ ತನ್ನ ಅಜ್ಜಿಯ ಬಳಿ ತೆರಳಿದೆ. ಪುಟ್ಟ ಬಾಲಕಿಗಾಗಿ ಹುಡುಕಾಟ ನಡೆಸುತ್ತಿದ್ದ ಪೋಷಕರು ನಿರಾಳವಾಗಿ ಸಿಡಿಪಿಓ ಮತ್ತು ಸಿಬ್ಬಂದಿಗಳಿಗೆ ಹ್ಯಾಟ್ಸಾಫ್ ಹೇಳಿದ್ದಾರೆ. ಒಟ್ಟಾರೆ ಸಿಡಿಪಿಓ ಇಲಾಖೆ ಅಧಿಕಾರಿಗಳ ಜಾಗೃತಿಯಿಂದ ಪುಟ್ಟ ಬಾಲಕಿ ತಾಯಿಯ ಮಡಿಲು ಸೇರಿದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು