5:54 AM Thursday4 - June 2026
ಬ್ರೇಕಿಂಗ್ ನ್ಯೂಸ್
ಯು.ಟಿ. ಖಾದರ್: ಸ್ಪೀಕರ್ ಸ್ಥಾನದಿಂದ ಮತ್ತೆ ಸಕ್ರೀಯ ರಾಜಕೀಯಕ್ಕೆ; ಡಿಕೆಶಿ ಸಂಪುಟದಲ್ಲಿ ಸಚಿವ… ಡಿ.ಕೆ. ಶಿವಕುಮಾರ್ ರಾಜ್ಯಭಾರ ಶುರು: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ: ನೂತನ ಪಕ್ಷ ಸ್ಥಾಪನೆ? ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ…

ಇತ್ತೀಚಿನ ಸುದ್ದಿ

ಆಸ್ಪತ್ರೆಯಲ್ಲಿ ನಾಪತ್ತೆಯಾದ ಪುಟ್ಟ ಬಾಲಕಿ: ಸಿಡಿಪಿಓ ಅಧಿಕಾರಿಗಳ ಕಾರ್ಯಾಚರಣೆಯಿಂದ ಕೆಲವೇ ತಾಸಿನಲ್ಲಿ ಪೋಷಕರ ಮಡಿಲಿಗೆ

07/11/2024, 15:05

ಮೋಹನ್ ನಂಜಗೂಡು ಮೈಸೂರು

info.reporterkarnataka@gmail.com

ತಾಯಿ ಮತ್ತು ಅಜ್ಜಿಯ ಜೊತೆ ಆಸ್ಪತ್ರೆಗೆ ಧಾವಿಸಿದ್ದ ಪುಟ್ಟ ಬಾಲಕಿ ನಾಪತ್ತೆಯಾಗಿದ್ದ ಕೆಲವೇ ಗಂಟೆಗಳಲ್ಲಿ ಸಿ ಡಿ ಪಿ ಓ ಭವ್ಯಶ್ರೀ ಮತ್ತು ಸಿಬ್ಬಂದಿಗಳ ಜಾಗೃತಿಯಿಂದ ಪೋಷಕರ ಕೈ ಸೇರಿ ಪೋಷಕರಲ್ಲಿ ಕಾಡಿದ್ದ ಆತಂಕ ದೂರವಾದ ಘಟನೆ ನಂಜನಗೂಡಿನಲ್ಲಿ ನಡೆದಿದೆ
ನಂಜನಗೂಡು ನಗರದ ನೀಲಕಂಠ ನಗರ ಬಡಾವಣೆಯ ಯೋಗೇಶ್ ಎಂಬುವರ ಪತ್ನಿ ಸೌಭಾಗ್ಯ ತನ್ನ ತಾಯಿ ಮತ್ತು ನಾಲ್ಕು ವರ್ಷದ ಪುಟ್ಟ ಮಗುವಿನ ಜೊತೆಗೂಡಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಸಲುವಾಗಿ ದಾವಿಸಿದ್ದರು.


ತನ್ನ ತಾಯಿಯ ಜೊತೆ ಸೌಭಾಗ್ಯ ವೈದ್ಯರ ಬಳಿ ತೆರಳಿದ ಸಂದರ್ಭ ಹೊರ ಭಾಗದಲ್ಲಿ ನಿಂತಿದ್ದ ಪುಟ್ಟ ಬಾಲಕಿ ತಬ್ಬಿಬ್ಬಾಗಿ ಆಸ್ಪತ್ರೆಯಿಂದ ಹೊರನಡೆದಿದೆ.
ತನ್ನ ಅಜ್ಜಿ ಮತ್ತು ತಾಯಿ ನನ್ನನ್ನು ಬಿಟ್ಟು ಹೋಗಿದ್ದಾರೆ ಎಂಬ ಆತಂಕದಲ್ಲಿ ಪುಟ್ಟ ಬಾಲಕಿ ಆಸ್ಪತ್ರೆಯಿಂದ ಸರಿಸುಮಾರು ಒಂದು ಕಿಲೋಮೀಟರ್ ದೂರದ ಹುಲ್ಲಹಳ್ಳಿ ಮುಖ್ಯರಸ್ತೆಯ ಕೆನರಾ ಬ್ಯಾಂಕ್ ಬಳಿಯ ಅಂಗಡಿ ಮುಂಭಾಗದಲ್ಲಿ ತಾಯಿ ಮತ್ತು ಅಜ್ಜಿಯ ಹುಡುಕಾಟದಲ್ಲಿ ತಲ್ಲಿನನಾಗಿದ್ದಳು. ನಾಲ್ಕು ವರ್ಷದ ಪುಟ್ಟ ಬಾಲಕಿಯ ಚಲನವಲನವನ್ನು ನೋಡಿದ ಅಂಗಡಿಯ ಮಾಲೀಕರು ನಗರದ ಸಿಡಿಪಿಓ ಭವ್ಯಶ್ರೀ ರವರ ದೂರವಾಣಿಗೆ ಕರೆ ಮಾಡಿ ವಿಚಾರ ಮುಟ್ಟಿಸಿದ್ದು ಕೂಡಲೇ ಧಾವಿಸಿದ ಸಿಡಿಪಿಓ ಭವ್ಯಶ್ರೀ ಮತ್ತು ಸಾಂತ್ವನ ಇಲಾಖೆಯ ಸಾವಿತ್ರಿ ನಾಲ್ಕು ವರ್ಷದ ಪುಟ್ಟ ಬಾಲಕಿಯನ್ನು ವಶಕ್ಕೆ ಪಡೆದು ಸರಿ ಸುಮಾರು ಎರಡು ಗಂಟೆಗಳ ಕಾಲ ಮಗುವಿನ ಪೋಷಕರ ಹುಡುಕಾಟದಲ್ಲಿ ತೊಡಗಿದ್ದಾರೆ. ನಂತರ ಮಗು ಬಂದ ದಾರಿಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಧಾವಿಸಿದ ಬಳಿಕ ಮಗು ನೇರವಾಗಿ ತನ್ನ ಅಜ್ಜಿಯ ಬಳಿ ತೆರಳಿದೆ. ಪುಟ್ಟ ಬಾಲಕಿಗಾಗಿ ಹುಡುಕಾಟ ನಡೆಸುತ್ತಿದ್ದ ಪೋಷಕರು ನಿರಾಳವಾಗಿ ಸಿಡಿಪಿಓ ಮತ್ತು ಸಿಬ್ಬಂದಿಗಳಿಗೆ ಹ್ಯಾಟ್ಸಾಫ್ ಹೇಳಿದ್ದಾರೆ. ಒಟ್ಟಾರೆ ಸಿಡಿಪಿಓ ಇಲಾಖೆ ಅಧಿಕಾರಿಗಳ ಜಾಗೃತಿಯಿಂದ ಪುಟ್ಟ ಬಾಲಕಿ ತಾಯಿಯ ಮಡಿಲು ಸೇರಿದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು