4:51 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಆಸ್ಪತ್ರೆಯಲ್ಲಿ ನಾಪತ್ತೆಯಾದ ಪುಟ್ಟ ಬಾಲಕಿ: ಸಿಡಿಪಿಓ ಅಧಿಕಾರಿಗಳ ಕಾರ್ಯಾಚರಣೆಯಿಂದ ಕೆಲವೇ ತಾಸಿನಲ್ಲಿ ಪೋಷಕರ ಮಡಿಲಿಗೆ

07/11/2024, 15:05

ಮೋಹನ್ ನಂಜಗೂಡು ಮೈಸೂರು

info.reporterkarnataka@gmail.com

ತಾಯಿ ಮತ್ತು ಅಜ್ಜಿಯ ಜೊತೆ ಆಸ್ಪತ್ರೆಗೆ ಧಾವಿಸಿದ್ದ ಪುಟ್ಟ ಬಾಲಕಿ ನಾಪತ್ತೆಯಾಗಿದ್ದ ಕೆಲವೇ ಗಂಟೆಗಳಲ್ಲಿ ಸಿ ಡಿ ಪಿ ಓ ಭವ್ಯಶ್ರೀ ಮತ್ತು ಸಿಬ್ಬಂದಿಗಳ ಜಾಗೃತಿಯಿಂದ ಪೋಷಕರ ಕೈ ಸೇರಿ ಪೋಷಕರಲ್ಲಿ ಕಾಡಿದ್ದ ಆತಂಕ ದೂರವಾದ ಘಟನೆ ನಂಜನಗೂಡಿನಲ್ಲಿ ನಡೆದಿದೆ
ನಂಜನಗೂಡು ನಗರದ ನೀಲಕಂಠ ನಗರ ಬಡಾವಣೆಯ ಯೋಗೇಶ್ ಎಂಬುವರ ಪತ್ನಿ ಸೌಭಾಗ್ಯ ತನ್ನ ತಾಯಿ ಮತ್ತು ನಾಲ್ಕು ವರ್ಷದ ಪುಟ್ಟ ಮಗುವಿನ ಜೊತೆಗೂಡಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಸಲುವಾಗಿ ದಾವಿಸಿದ್ದರು.


ತನ್ನ ತಾಯಿಯ ಜೊತೆ ಸೌಭಾಗ್ಯ ವೈದ್ಯರ ಬಳಿ ತೆರಳಿದ ಸಂದರ್ಭ ಹೊರ ಭಾಗದಲ್ಲಿ ನಿಂತಿದ್ದ ಪುಟ್ಟ ಬಾಲಕಿ ತಬ್ಬಿಬ್ಬಾಗಿ ಆಸ್ಪತ್ರೆಯಿಂದ ಹೊರನಡೆದಿದೆ.
ತನ್ನ ಅಜ್ಜಿ ಮತ್ತು ತಾಯಿ ನನ್ನನ್ನು ಬಿಟ್ಟು ಹೋಗಿದ್ದಾರೆ ಎಂಬ ಆತಂಕದಲ್ಲಿ ಪುಟ್ಟ ಬಾಲಕಿ ಆಸ್ಪತ್ರೆಯಿಂದ ಸರಿಸುಮಾರು ಒಂದು ಕಿಲೋಮೀಟರ್ ದೂರದ ಹುಲ್ಲಹಳ್ಳಿ ಮುಖ್ಯರಸ್ತೆಯ ಕೆನರಾ ಬ್ಯಾಂಕ್ ಬಳಿಯ ಅಂಗಡಿ ಮುಂಭಾಗದಲ್ಲಿ ತಾಯಿ ಮತ್ತು ಅಜ್ಜಿಯ ಹುಡುಕಾಟದಲ್ಲಿ ತಲ್ಲಿನನಾಗಿದ್ದಳು. ನಾಲ್ಕು ವರ್ಷದ ಪುಟ್ಟ ಬಾಲಕಿಯ ಚಲನವಲನವನ್ನು ನೋಡಿದ ಅಂಗಡಿಯ ಮಾಲೀಕರು ನಗರದ ಸಿಡಿಪಿಓ ಭವ್ಯಶ್ರೀ ರವರ ದೂರವಾಣಿಗೆ ಕರೆ ಮಾಡಿ ವಿಚಾರ ಮುಟ್ಟಿಸಿದ್ದು ಕೂಡಲೇ ಧಾವಿಸಿದ ಸಿಡಿಪಿಓ ಭವ್ಯಶ್ರೀ ಮತ್ತು ಸಾಂತ್ವನ ಇಲಾಖೆಯ ಸಾವಿತ್ರಿ ನಾಲ್ಕು ವರ್ಷದ ಪುಟ್ಟ ಬಾಲಕಿಯನ್ನು ವಶಕ್ಕೆ ಪಡೆದು ಸರಿ ಸುಮಾರು ಎರಡು ಗಂಟೆಗಳ ಕಾಲ ಮಗುವಿನ ಪೋಷಕರ ಹುಡುಕಾಟದಲ್ಲಿ ತೊಡಗಿದ್ದಾರೆ. ನಂತರ ಮಗು ಬಂದ ದಾರಿಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಧಾವಿಸಿದ ಬಳಿಕ ಮಗು ನೇರವಾಗಿ ತನ್ನ ಅಜ್ಜಿಯ ಬಳಿ ತೆರಳಿದೆ. ಪುಟ್ಟ ಬಾಲಕಿಗಾಗಿ ಹುಡುಕಾಟ ನಡೆಸುತ್ತಿದ್ದ ಪೋಷಕರು ನಿರಾಳವಾಗಿ ಸಿಡಿಪಿಓ ಮತ್ತು ಸಿಬ್ಬಂದಿಗಳಿಗೆ ಹ್ಯಾಟ್ಸಾಫ್ ಹೇಳಿದ್ದಾರೆ. ಒಟ್ಟಾರೆ ಸಿಡಿಪಿಓ ಇಲಾಖೆ ಅಧಿಕಾರಿಗಳ ಜಾಗೃತಿಯಿಂದ ಪುಟ್ಟ ಬಾಲಕಿ ತಾಯಿಯ ಮಡಿಲು ಸೇರಿದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು