11:47 PM Friday3 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಅಸ್ಸಾಂ, ಮೇಘಾಲಯ ಭಾರಿ ಮಳೆ: ಮಂಗಳೂರು ಅಡಿಕೆ ಮಾರುಕಟ್ಟೆ ಮತ್ತೆ ಚೇತರಿಕೆ: ಏರಿಕೆಯತ್ತ ಮುಖ ಮಾಡಿದ ಒಕ್ಕಣ್ಣ!

21/07/2022, 10:43

ಮಂಗಳೂರು(reporterkarnataka.com):.ಅಡಿಕೆ ಮಾರುಕಟ್ಟೆ ಮತ್ತೆ ಚೇತರಿಸಿಕೊಂಡಿದೆ. ಕಳೆದ 2 ತಿಂಗಳಿನಿಂದ ಸ್ಥಿರವಾಗಿದ್ದ ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆ ಧಾರಣೆ ಏರಿಕೆಯತ್ತ ಮುಖ ಮಾಡಿದೆ. ಖಾಸಗಿ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಕೆ.ಜಿ.ಗೆ 450 ರೂ.ಗಳ ಅಂಚಿಗೆ ತಲುಪಿದೆ.

ಕ್ಯಾಂಪ್ಕೋಗೆ ಹೋಲಿಸಿದರೆ ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಕೆ.ಜಿ.ಗೆ 7 ರೂ., ಹಳೆ ಅಡಿಕೆಗೆ 10 ರೂ.ಗಳಷ್ಟು ಅಧಿಕ ಇದ್ದು ಬೆಳೆಗಾರರು ಹೊರ ಮಾರುಕಟ್ಟೆಯತ್ತ ದೃಷ್ಟಿ ನೆಟ್ಟಿದ್ದಾರೆ.

ಕಳೆದ ಬಾರಿ ಹೊರ ಮಾರುಕಟ್ಟೆ ಧಾರಣೆಗೆ ಸರಿಸಾಟಿಯಾಗಿ ಅಡಿಕೆ ಖರೀದಿ ಸಹಕಾರಿ ಸಂಸ್ಥೆಗಳು ಕೂಡ ಧಾರಣೆ ನೀಡಿದ್ದವು. ಇದರಿಂದ ದರ ಏರಿಕೆಯ ವಿಚಾರದಲ್ಲಿ ಪೈಪೋಟಿ ನಡೆದಿತ್ತು.

ಕೆಲವು ದಿನಗಳ ಹಿಂದೆ ಕ್ಯಾಂಪ್ಕೋದಲ್ಲಿ ಹೊಸ ಅಡಿಕೆಯನ್ನು 430 ರೂ., ಹಳೆ ಅಡಿಕೆಯನ್ನು 520 ರೂ.ಗೆ ಖರೀದಿಸಲಾಗುತ್ತಿತ್ತು. ಇದೀಗ ಧಾರಣೆ ಕೊಂಚ ಏರಿದೆ. ಜು. 11ರಂದು ಪುತ್ತೂರು ಕ್ಯಾಂಪ್ಕೋದಲ್ಲಿ ಹೊಸದಕ್ಕೆ 435-450 ರೂ. ಇದ್ದರೆ ಹಳೆಯದಕ್ಕೆ 510-550 ರೂ., ಜು. 19ರಂದು ಹೊಸದಕ್ಕೆ 440 ರೂ., ಹಳೆಯದಕ್ಕೆ 565 ರೂ. ಇತ್ತು. ಬೆಳ್ಳಾರೆ ಹೊರ ಮಾರುಕಟ್ಟೆಯಲ್ಲಿ ಜು. 11ರಂದು ಹೊಸದಕ್ಕೆ 442 ರೂ. ಇದ್ದರೆ ಹಳೆಯದಕ್ಕೆ 560 ರೂ. ಇತ್ತು. ಜು. 19ರಂದು ಕ್ರಮವಾಗಿ 447 ರೂ. ಮತ್ತು 565 ರೂ.ಗಳಲ್ಲಿತ್ತು.ಧಾರಣೆ ಏರಿದರೂ ಬೇಡಿಕೆಗೆ ತಕ್ಕಷ್ಟು ಅಡಿಕೆ ಮಾರುಕಟ್ಟೆಗೆ ಬರುತ್ತಿಲ್ಲ.

ಅಸ್ಸಾಂ, ಮೇಘಾಲಯ ಸೇರಿದಂತೆ ಉತ್ತರದ ಭಾಗದಲ್ಲಿ ಭಾರೀ ಮಳೆಯ ಕಾರಣ ಅಡಿಕೆ ವಹಿವಾಟು ಕುಸಿತ ಕಂಡಿದ್ದು, ಮಾರುಕಟ್ಟೆಯು ದಕ್ಷಿಣ‌‌ ಭಾರತವನ್ನು ಅವಲಂಬಿ ಸಿರುವುದು ಕೂಡ ಬೇಡಿಕೆ ಹೆಚ್ಚಳಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು