2:09 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಅಸ್ಸಾಂ, ಮೇಘಾಲಯ ಭಾರಿ ಮಳೆ: ಮಂಗಳೂರು ಅಡಿಕೆ ಮಾರುಕಟ್ಟೆ ಮತ್ತೆ ಚೇತರಿಕೆ: ಏರಿಕೆಯತ್ತ ಮುಖ ಮಾಡಿದ ಒಕ್ಕಣ್ಣ!

21/07/2022, 10:43

ಮಂಗಳೂರು(reporterkarnataka.com):.ಅಡಿಕೆ ಮಾರುಕಟ್ಟೆ ಮತ್ತೆ ಚೇತರಿಸಿಕೊಂಡಿದೆ. ಕಳೆದ 2 ತಿಂಗಳಿನಿಂದ ಸ್ಥಿರವಾಗಿದ್ದ ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆ ಧಾರಣೆ ಏರಿಕೆಯತ್ತ ಮುಖ ಮಾಡಿದೆ. ಖಾಸಗಿ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಕೆ.ಜಿ.ಗೆ 450 ರೂ.ಗಳ ಅಂಚಿಗೆ ತಲುಪಿದೆ.

ಕ್ಯಾಂಪ್ಕೋಗೆ ಹೋಲಿಸಿದರೆ ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಕೆ.ಜಿ.ಗೆ 7 ರೂ., ಹಳೆ ಅಡಿಕೆಗೆ 10 ರೂ.ಗಳಷ್ಟು ಅಧಿಕ ಇದ್ದು ಬೆಳೆಗಾರರು ಹೊರ ಮಾರುಕಟ್ಟೆಯತ್ತ ದೃಷ್ಟಿ ನೆಟ್ಟಿದ್ದಾರೆ.

ಕಳೆದ ಬಾರಿ ಹೊರ ಮಾರುಕಟ್ಟೆ ಧಾರಣೆಗೆ ಸರಿಸಾಟಿಯಾಗಿ ಅಡಿಕೆ ಖರೀದಿ ಸಹಕಾರಿ ಸಂಸ್ಥೆಗಳು ಕೂಡ ಧಾರಣೆ ನೀಡಿದ್ದವು. ಇದರಿಂದ ದರ ಏರಿಕೆಯ ವಿಚಾರದಲ್ಲಿ ಪೈಪೋಟಿ ನಡೆದಿತ್ತು.

ಕೆಲವು ದಿನಗಳ ಹಿಂದೆ ಕ್ಯಾಂಪ್ಕೋದಲ್ಲಿ ಹೊಸ ಅಡಿಕೆಯನ್ನು 430 ರೂ., ಹಳೆ ಅಡಿಕೆಯನ್ನು 520 ರೂ.ಗೆ ಖರೀದಿಸಲಾಗುತ್ತಿತ್ತು. ಇದೀಗ ಧಾರಣೆ ಕೊಂಚ ಏರಿದೆ. ಜು. 11ರಂದು ಪುತ್ತೂರು ಕ್ಯಾಂಪ್ಕೋದಲ್ಲಿ ಹೊಸದಕ್ಕೆ 435-450 ರೂ. ಇದ್ದರೆ ಹಳೆಯದಕ್ಕೆ 510-550 ರೂ., ಜು. 19ರಂದು ಹೊಸದಕ್ಕೆ 440 ರೂ., ಹಳೆಯದಕ್ಕೆ 565 ರೂ. ಇತ್ತು. ಬೆಳ್ಳಾರೆ ಹೊರ ಮಾರುಕಟ್ಟೆಯಲ್ಲಿ ಜು. 11ರಂದು ಹೊಸದಕ್ಕೆ 442 ರೂ. ಇದ್ದರೆ ಹಳೆಯದಕ್ಕೆ 560 ರೂ. ಇತ್ತು. ಜು. 19ರಂದು ಕ್ರಮವಾಗಿ 447 ರೂ. ಮತ್ತು 565 ರೂ.ಗಳಲ್ಲಿತ್ತು.ಧಾರಣೆ ಏರಿದರೂ ಬೇಡಿಕೆಗೆ ತಕ್ಕಷ್ಟು ಅಡಿಕೆ ಮಾರುಕಟ್ಟೆಗೆ ಬರುತ್ತಿಲ್ಲ.

ಅಸ್ಸಾಂ, ಮೇಘಾಲಯ ಸೇರಿದಂತೆ ಉತ್ತರದ ಭಾಗದಲ್ಲಿ ಭಾರೀ ಮಳೆಯ ಕಾರಣ ಅಡಿಕೆ ವಹಿವಾಟು ಕುಸಿತ ಕಂಡಿದ್ದು, ಮಾರುಕಟ್ಟೆಯು ದಕ್ಷಿಣ‌‌ ಭಾರತವನ್ನು ಅವಲಂಬಿ ಸಿರುವುದು ಕೂಡ ಬೇಡಿಕೆ ಹೆಚ್ಚಳಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು