2:02 PM Friday1 - May 2026
ಬ್ರೇಕಿಂಗ್ ನ್ಯೂಸ್
ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು…

ಇತ್ತೀಚಿನ ಸುದ್ದಿ

ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು ಹಿಂಡು ಕುಟುಂಬ!

10/09/2025, 13:09

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ತಲೆ ಮೇಲೆ ಒಂದು ಚೀಲ ಬೆನ್ನಿನಲ್ಲಿ ಒಂದು ಬಟ್ಟೆ ತುಂಬಿದ ಬ್ಯಾಗ್ ನಿಂತ ಗಂಡಸರು, ಕಂಕುಳದಲ್ಲಿ ಒಂದು ಮಗು ಅಕ್ಕ ಪಕ್ಕ ಮತ್ತೇರಡು ಮಕ್ಕಳು. ಹಾಸನ ಬಸ್ ಅಂತೂ ಫುಲ್. ಈ ದೃಶ್ಯಗಳು ಕಂಡು ಬಂದದ್ದು ಕುಶಾಲನಗರ ಬಸ್ ನಿಲ್ದಾಣದಲ್ಲಿ.
ಸರಿ ಸುಮಾರು 10 ಗಂಟೆಗೆ ಒಂದರ ಹಿಂದೆ ಒಂದರಂತೆ, ಕೋಣನೂರು, ಅರಕಲಗೋಡು, ಸಕಲೇಶಪುರ, ಚಿಕ್ಕಮಗಳೂರು ಭಾಗಕ್ಕೆ ಕುಶಾಲನಗದಿಂದ ಬಸ್ ಗಳು ಹೆಚ್ಚಾಗಿ ಸಂಚರಿಸುತ್ತದೆ.


ಸಾಮಾನ್ಯವಾಗಿ ಈ ಸಮಯದಲ್ಲಿ ಬೆರಳೆಣಿಕೆಯ ಪ್ರಯಾಣಿಕರು ಹಾಸನ ಬಸ್ ಹತ್ತಿದರೆ, ಬುಧವಾರ ಬಸ್ ನಿರ್ವಾಹಕರು ಸ್ಥಳೀಯರಿಗಿಂತ ಅಸ್ಸಾಂ ಕಾರ್ಮಿಕರನ್ನು ತುಂಬಿಸುವಲ್ಲಿ ಬ್ಯುಸಿ ಆಗಿದ್ದ ದೃಶ್ಯಗಳು ಕಂಡು ಬಂತು. ಕೊಡಗಿನ ಯಾವುದೇ ಖಾಸಗಿ, ಸಾರಿಗೆ ಬಸ್ ಗಳಾಗಲಿ ಕನಿಷ್ಠ ಹತ್ತು ಮಂದಿ ಅಂತೂ ಅಸ್ಸಾಂ ಕಾರ್ಮಿಕರು ಇದ್ದೆ ಇರುತ್ತಾರೆ. ಅವರ ಭಾಷೆ, ಚೀರಾಟ, ವಿಮಲ್ ಪಾನ್ ಮಸಾಲೆ ಘಾಟು ಅಸ್ಸಾಂ, ಪಶ್ಚಿಮ ಬಂಗಾಳ, ಒರಿಸ್ಸಾ ರಾಜ್ಯದಲ್ಲಿ ಇದೆವೋ ಅನ್ನಿಸುತ್ತದೆ. ಇವರೆಲ್ಲ ನಿಜಕ್ಕೂ ಅಸ್ಸಾಮಿಗಳ ಅಥವಾ ನೆರೆಯ ರಾಷ್ಟ್ರ ಬಾಂಗ್ಲಾದೇಶದವರ ಎಂದು ಅನುಮಾನಿಸುವುದು ಕಷ್ಟ ಕಾರಣ ಇವರ ಬಳಿ ಸ್ಥಳೀಯ ವಿಳಾಸದ ಆಧಾರ್ ಕಾರ್ಡ್ ಗಳಿದೆ. ಒಟ್ಟಿನಲ್ಲಿ, ಕೆಲ ಗಂಟೆಗಳ ಕಾಲ ಸ್ಥಳೀಯರಂತೂ ಬಸ್ ಗಳಲ್ಲಿ ಸೀಟು ಸಿಗದೆ ಹೈರಾಣ ಆಗಿದಂತೂ ಸತ್ಯ.

ಇತ್ತೀಚಿನ ಸುದ್ದಿ

ಜಾಹೀರಾತು