10:30 PM Saturday7 - March 2026
ಬ್ರೇಕಿಂಗ್ ನ್ಯೂಸ್
ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಅಸೆಂಬ್ಲಿ ಚುನಾವಣೆ: ಬಂಟ್ವಾಳದಲ್ಲಿ ಪೊಲೀಸ್ ಇಲಾಖೆಯಿಂದ ದೊಂಬಿ ನಿಗ್ರಹ ಕವಾಯತು

22/03/2023, 18:33

ಬಂಟ್ವಾಳ(reporterkarnataka.com):
ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳದಲ್ಲಿ ಪೊಲೀಸ್ ಇಲಾಖೆಯಿಂದ ದೊಂಬಿ ನಿಗ್ರಹ ಕವಾಯತು ನಡೆಸಲಾಯಿತು.
ಬಂಟ್ವಾಳ ನಗರ, ಬಂಟ್ವಾಳ ಗ್ರಾಮೀಣ, ಬಂಟ್ವಾಳ ಸಂಚಾರ, ವಿಟ್ಲ, ಪೊಲೀಸ್
ಠಾಣೆಗಳ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಬಿ.ಸಿ.ರೋಡ್‌ ಜಂಕ್ಷನ್ ನ ಸಮೀಪದ ಬಂಟ್ವಾಳ ಪೇಟೆಯ ರಸ್ತೆಯ ಪಕ್ಕದಲ್ಲಿರುವ ಮೈದಾನದಲ್ಲಿAnti Riot Drill ( ದೊಂಬಿ
ನಿಗ್ರಹ ಕವಾಯತು ) ತರಬೇತಿಯನ್ನು ನೀಡಲಾಯಿತು. ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಗಲಭೆ ಸಂದರ್ಭದಲ್ಲಿ ಯಾವ ರೀತಿ ಸ್ಪಂದಿಸಬೇಕು, ಕಾನೂನು ಸುವ್ಯವಸ್ಥೆ ಸಮಸ್ಯೆ ಉಂಟಾದಾಗ ಯಾವ ರೀತಿ ರಕ್ಷಣಾತ್ಮಕವಾಗಿ ಎದುರಿಸಬೇಕೆಂಬ
ಬಗ್ಗೆ ಪ್ರಾಯೋಗಿಕವಾಗಿ ತಿಳಿಸಲಾಯಿತು.
ಇಂತಹ ಕವಾಯತಿನಿಂದ ಪೊಲೀಸ್ ಅಧಿಕಾರಿ,
ಸಿಬ್ಬಂದಿಗಳು ವೃತ್ತಿ ಕೌಶಲ್ಯ, ಸ್ಥೈರ್ಯ,ಆತ್ಮ ವಿಶ್ವಾಸ ಗಳನ್ನು ಹೆಚ್ಚಿಸಿಕೊಂಡು ವೃತ್ತಿಪರತೆಯಿಂದ
ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು