1:56 PM Wednesday23 - April 2025
ಬ್ರೇಕಿಂಗ್ ನ್ಯೂಸ್
Terror Attack | ಕಾಶ್ಮೀರ: ಭಾರತೀಯ ಸೇನಾ ಕಾರ್ಯಾಚರಣೆಗೆ ಹತರಾದ ಉಗ್ರಗಾಮಿಗಳು: ಕಣಿವೆಯಲ್ಲಿ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರಗಾಮಿಗಳ ವಿರುದ್ಧ ಸೇನಾ ಕಾರ್ಯಾಚರಣೆ: ಇಬ್ಬರು… ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ…

ಇತ್ತೀಚಿನ ಸುದ್ದಿ

ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ ರಾಜ್ಯ ಸರಕಾರ ಅಭಿನಂದನೆ

24/11/2024, 21:34

ಕೋಲಾರ(reporterkarnataka.com): ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ಸಾರ್ವಜನಿಕರಿಗೆ ಅನುಕೂಲವಾಗುವ ದಿಸೆಯಲ್ಲಿ ಅವಧಿಗಿಂತ ಮುಂಚೆಯೇ ಗುರಿ ತಲುಪಿ ಕೋಲಾರ ಜಿಲ್ಲೆಯನ್ನು ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿರುವಂತೆ ಮಾಡಿದ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರಿಗೆ ರಾಜ್ಯ ಸರ್ಕಾರ ಅಭಿನಂದಿಸಿದೆ.
ಕಂದಾಯ ಇಲಾಖೆಯ ಆಯುಕ್ತ ಪೊಮ್ಮಲ ಸುನಿಲ್ ಕುಮಾರ್ ಅವರು ಈ ಕುರಿತು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರಿಗೆ ಅಭಿನಂದನಾ ಪತ್ರ ಬರೆದಿದ್ದು, ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿಯಲ್ಲಿ ರಾಜ್ಯದ ಸಾರ್ವಜನಿಕರಿಗೆ ವಿವಿಧ ಪ್ರಮಾಣ ಪತ್ರಗಳ ಸೇವೆಯನ್ನು ನೀಡುವಲ್ಲಿ ಕೋಲಾರ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ.
ಕಳೆದ ಅಕ್ಟೋಬರ್ ತಿಂಗಳಲ್ಲಿ ಸ್ವೀಕರಿಸಲಾಗಿರುವ 36718 ಅರ್ಜಿಗಳನ್ನು ನಿಗದಿತ ಅವಧಿಗಿಂತ ಮೊದಲೇ ಶೇ 100ರಷ್ಟು ವಿಲೇವಾರಿ ಮಾಡಿ, 10 ಸಿನ್ಮಾ ಮೌಲ್ಯ ಪಡೆದಿರುತ್ತೀರಿ ಎಂದು ಅಭಿನಂದಿಸಿದ್ದಾರೆ. 9.99 ವಿಲೇವಾರಿ ಸೂಚ್ಯಂಕದ ಪ್ರಕಾರ ಕೋಲಾರ ಜಿಲ್ಲೆಯಲ್ಲಿ 10.99 ಪಟ್ಟು ನಿಗದಿತ ಅವಧಿಗೆ ಮುಂಚೆ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಿದ್ದೀರಿ.
ಕೋಲಾರ ಜಿಲ್ಲೆ ಈ ವಿಷಯದಲ್ಲಿ ರಾಜ್ಯಕ್ಕೆ ಮುಂಚೂಣಿ ಸ್ಥಾನ ಪಡೆದಿದೆ. ನಾಡ ಕಚೇರಿ ಹಾಗೂ ಅಟಲ್ ಜಿ ಜನಸ್ನೇಹಿ ಕಚೇರಿಗಳ ಸಹಕಾರ ಮತ್ತು ಸಿಬ್ಬಂದಿಗಳ ಕಾರ್ಯತತ್ಪರತೆ ಶ್ಲಾಘನೀಯ ಎಂದು ಅಭಿನಂದನೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು