5:54 AM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ ರಾಜ್ಯ ಸರಕಾರ ಅಭಿನಂದನೆ

24/11/2024, 21:34

ಕೋಲಾರ(reporterkarnataka.com): ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ಸಾರ್ವಜನಿಕರಿಗೆ ಅನುಕೂಲವಾಗುವ ದಿಸೆಯಲ್ಲಿ ಅವಧಿಗಿಂತ ಮುಂಚೆಯೇ ಗುರಿ ತಲುಪಿ ಕೋಲಾರ ಜಿಲ್ಲೆಯನ್ನು ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿರುವಂತೆ ಮಾಡಿದ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರಿಗೆ ರಾಜ್ಯ ಸರ್ಕಾರ ಅಭಿನಂದಿಸಿದೆ.
ಕಂದಾಯ ಇಲಾಖೆಯ ಆಯುಕ್ತ ಪೊಮ್ಮಲ ಸುನಿಲ್ ಕುಮಾರ್ ಅವರು ಈ ಕುರಿತು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರಿಗೆ ಅಭಿನಂದನಾ ಪತ್ರ ಬರೆದಿದ್ದು, ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿಯಲ್ಲಿ ರಾಜ್ಯದ ಸಾರ್ವಜನಿಕರಿಗೆ ವಿವಿಧ ಪ್ರಮಾಣ ಪತ್ರಗಳ ಸೇವೆಯನ್ನು ನೀಡುವಲ್ಲಿ ಕೋಲಾರ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ.
ಕಳೆದ ಅಕ್ಟೋಬರ್ ತಿಂಗಳಲ್ಲಿ ಸ್ವೀಕರಿಸಲಾಗಿರುವ 36718 ಅರ್ಜಿಗಳನ್ನು ನಿಗದಿತ ಅವಧಿಗಿಂತ ಮೊದಲೇ ಶೇ 100ರಷ್ಟು ವಿಲೇವಾರಿ ಮಾಡಿ, 10 ಸಿನ್ಮಾ ಮೌಲ್ಯ ಪಡೆದಿರುತ್ತೀರಿ ಎಂದು ಅಭಿನಂದಿಸಿದ್ದಾರೆ. 9.99 ವಿಲೇವಾರಿ ಸೂಚ್ಯಂಕದ ಪ್ರಕಾರ ಕೋಲಾರ ಜಿಲ್ಲೆಯಲ್ಲಿ 10.99 ಪಟ್ಟು ನಿಗದಿತ ಅವಧಿಗೆ ಮುಂಚೆ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಿದ್ದೀರಿ.
ಕೋಲಾರ ಜಿಲ್ಲೆ ಈ ವಿಷಯದಲ್ಲಿ ರಾಜ್ಯಕ್ಕೆ ಮುಂಚೂಣಿ ಸ್ಥಾನ ಪಡೆದಿದೆ. ನಾಡ ಕಚೇರಿ ಹಾಗೂ ಅಟಲ್ ಜಿ ಜನಸ್ನೇಹಿ ಕಚೇರಿಗಳ ಸಹಕಾರ ಮತ್ತು ಸಿಬ್ಬಂದಿಗಳ ಕಾರ್ಯತತ್ಪರತೆ ಶ್ಲಾಘನೀಯ ಎಂದು ಅಭಿನಂದನೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು