12:16 AM Tuesday23 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಅಥಣಿ: 12 ಅಡಿ ಆಳದ ಟ್ಯಾಂಕ್ ನಲ್ಲಿ ಕುಸಿದು ಬಿದ್ದ 3 ಪುರಸಭೆ ಸಿಬ್ಬಂದಿಗಳ ರಕ್ಷಣೆ

06/10/2022, 13:56

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಪಟ್ಟಣದ ಉರ್ದು ಶಾಲೆಯ ಹತ್ತಿರ 12 ಅಡಿ ಆಳವಿರುವ ಚೆಂಬರನಲ್ಲಿ ಪೌಡರ್ ಸಿಂಪಡನೆ ಮಾಡಿ ಚೆಂಬರನ ವಾಲ್ ಬಂದ ಮಾಡಬೇಕೆಂದು ಟ್ಯಾಂಕನಲ್ಲಿ ಕೆಳಗಿಳಿದು ಕಾರ್ಯಚರಣೆಯನ್ನು ಮಾಡುವ ಸಂದರ್ಭದಲ್ಲಿ ಮೂವರು ಪುರಸಭೆ ಸಿಬ್ಬಂದಿಗಳಿಗೆ ಆಮ್ಲಜನಕ ಕೊರತೆಯಾಗಿ ಟ್ಯಾಂಕ್ ನಲ್ಲಿಯೇ ಕುಸಿದು ಬಿದ್ದಿವರನ್ನು ರಕ್ಷಣೆ ಮಾಡಿರುವ ಘಟನೆ‌ ನಿನ್ನೆ ಜರುಗಿದೆ.

ಟ್ಯಾಂಕ್ ಒಳಗೆ ಇಳಿದ ಸಿಬ್ಬಂದಿಗಳನ್ನು ಟ್ಯಾಂಕಿನ‌‌ ಮೇಲಿರುವ ಮತ್ತೋರ್ವ ಪುರಸಭೆ ಸಿಬ್ಬಂದಿ ಕುಮಾರ ಮಾಳಿ ಗಮನಿಸಿ ಖುದ್ದಾಗಿ ಠಾಣೆಗೆ‌ ಮಾಹಿತಿ‌ ನೀಡಿದ ನಂತರ ತಕ್ಷಣ ಅಥಣಿ ಅಗ್ನಿಶಾಮಕ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ತೆರಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಟ್ಯಾಂಕನಲ್ಲಿ ಬಿದ್ದಿದ್ದ ಪ್ರಕಾಶ ಅಶೋಕ ಕುಂಬಾರ (35 ), ಅಪ್ಪಾಸಾಬ ಅಥಣಿಕರ(40), ರಮೇಶ ಪೂಜಾರಿ (42) ಎಂಬುವವರನ್ನು ಜೀವಂತವಾಗಿ ಟ್ಯಾಂಕನಿಂದ ಹೊರ ತೆಗೆದು ಜೀವಂತ ರಕ್ಷಣೆ ಮಾಡಿದರು.         


ಈ ರಕ್ಷಣಾ ಕಾರ್ಯಚರಣೆಯಲ್ಲಿ ರಾಜು ತಳವಾರ, ಎ.ಬಿ. ಬಡಚಿ, ಎಮ್.ಬಿ.ಬಿರಾದಾರ, ನೀಲಪ್ಪ ಹೇರವಾಡೆ, ಎಮ್.ಎಸ್. ಕುಂಬಾರ, ಸುರೇಶ ಮಾದರ, ಶಿವಪ್ಪ ಹಣಮಾಪೂರ, ರವೀಂದ್ರ ಸಂಗಮ, ಶಿವಾನಂದ ಶಿರಹಟ್ಟಿ,ಸಚೀನ ಹಲ್ಯಾಳ, ಶಿವಯ್ಯ ಮಠಪತಿ, ಸಂತೋಷ ಚೌಗುಲಾ, ಸಂತೋಷ ಧರ್ಮಟ್ಟಿ ಸೇರಿದಂತೆ ಇತರರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು