6:22 PM Sunday15 - February 2026
ಬ್ರೇಕಿಂಗ್ ನ್ಯೂಸ್
ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ!

ಇತ್ತೀಚಿನ ಸುದ್ದಿ

ಅಥಣಿ: 12 ಅಡಿ ಆಳದ ಟ್ಯಾಂಕ್ ನಲ್ಲಿ ಕುಸಿದು ಬಿದ್ದ 3 ಪುರಸಭೆ ಸಿಬ್ಬಂದಿಗಳ ರಕ್ಷಣೆ

06/10/2022, 13:56

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಪಟ್ಟಣದ ಉರ್ದು ಶಾಲೆಯ ಹತ್ತಿರ 12 ಅಡಿ ಆಳವಿರುವ ಚೆಂಬರನಲ್ಲಿ ಪೌಡರ್ ಸಿಂಪಡನೆ ಮಾಡಿ ಚೆಂಬರನ ವಾಲ್ ಬಂದ ಮಾಡಬೇಕೆಂದು ಟ್ಯಾಂಕನಲ್ಲಿ ಕೆಳಗಿಳಿದು ಕಾರ್ಯಚರಣೆಯನ್ನು ಮಾಡುವ ಸಂದರ್ಭದಲ್ಲಿ ಮೂವರು ಪುರಸಭೆ ಸಿಬ್ಬಂದಿಗಳಿಗೆ ಆಮ್ಲಜನಕ ಕೊರತೆಯಾಗಿ ಟ್ಯಾಂಕ್ ನಲ್ಲಿಯೇ ಕುಸಿದು ಬಿದ್ದಿವರನ್ನು ರಕ್ಷಣೆ ಮಾಡಿರುವ ಘಟನೆ‌ ನಿನ್ನೆ ಜರುಗಿದೆ.

ಟ್ಯಾಂಕ್ ಒಳಗೆ ಇಳಿದ ಸಿಬ್ಬಂದಿಗಳನ್ನು ಟ್ಯಾಂಕಿನ‌‌ ಮೇಲಿರುವ ಮತ್ತೋರ್ವ ಪುರಸಭೆ ಸಿಬ್ಬಂದಿ ಕುಮಾರ ಮಾಳಿ ಗಮನಿಸಿ ಖುದ್ದಾಗಿ ಠಾಣೆಗೆ‌ ಮಾಹಿತಿ‌ ನೀಡಿದ ನಂತರ ತಕ್ಷಣ ಅಥಣಿ ಅಗ್ನಿಶಾಮಕ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ತೆರಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಟ್ಯಾಂಕನಲ್ಲಿ ಬಿದ್ದಿದ್ದ ಪ್ರಕಾಶ ಅಶೋಕ ಕುಂಬಾರ (35 ), ಅಪ್ಪಾಸಾಬ ಅಥಣಿಕರ(40), ರಮೇಶ ಪೂಜಾರಿ (42) ಎಂಬುವವರನ್ನು ಜೀವಂತವಾಗಿ ಟ್ಯಾಂಕನಿಂದ ಹೊರ ತೆಗೆದು ಜೀವಂತ ರಕ್ಷಣೆ ಮಾಡಿದರು.         


ಈ ರಕ್ಷಣಾ ಕಾರ್ಯಚರಣೆಯಲ್ಲಿ ರಾಜು ತಳವಾರ, ಎ.ಬಿ. ಬಡಚಿ, ಎಮ್.ಬಿ.ಬಿರಾದಾರ, ನೀಲಪ್ಪ ಹೇರವಾಡೆ, ಎಮ್.ಎಸ್. ಕುಂಬಾರ, ಸುರೇಶ ಮಾದರ, ಶಿವಪ್ಪ ಹಣಮಾಪೂರ, ರವೀಂದ್ರ ಸಂಗಮ, ಶಿವಾನಂದ ಶಿರಹಟ್ಟಿ,ಸಚೀನ ಹಲ್ಯಾಳ, ಶಿವಯ್ಯ ಮಠಪತಿ, ಸಂತೋಷ ಚೌಗುಲಾ, ಸಂತೋಷ ಧರ್ಮಟ್ಟಿ ಸೇರಿದಂತೆ ಇತರರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು