7:08 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಅಥಣಿ: 4.80 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕುಮಠಳ್ಳಿ ಚಾಲನೆ 

04/03/2022, 11:24

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ಬೆಳಗಾವಿ ಜಿಲ್ಲೆ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ತಾಲೂಕಿನ ಬನ್ನೂರ್ ಸವದಿ ನಂದಗಾವ ಶೇಗುಣಸಿ ಸತ್ತಿ ಗ್ರಾಮಗಳಲ್ಲಿ ಸುಮಾರು 4 ಕೋಟಿ 80 ಲಕ್ಷ ರೂ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು,ಕ್ಷೇತ್ರದ ಅಭಿವೃದ್ಧಿಯಲ್ಲಿ ಯಾವುದೇ ಹಿಂಜರಿಕೆಯಿಲ್ಲ. ಇನ್ನೂ ಹತ್ತು ಹಲವಾರು ಅಭಿವೃದ್ಧಿ ಯೋಜನೆಗಳು ಮಾಡುವುದಾಗಿ ಭರವಸೆ ನೀಡಿದರು. ನೆರೆ ಸಂತ್ರಸ್ತರ ಮನೆ ಹಂಚಿಕೆಯಲ್ಲಿ ಅಲ್ಪ ದೋಷದ ಬಗ್ಗೆ ನನ್ನ ಗಮನಕ್ಕೆ ಬಂದಿದೆ ಅದನ್ನು ಕೂಡಲೇ ಸರಿಪಡಿಸಿ ತಕ್ಕ ಫಲಾನುಭವಿಗಳಿಗೆ ನ್ಯಾಯ ಕೊಡಿಸುವುದು ನಮ್ಮ ಧರ್ಮ. ಕೃಷ್ಣ ತೀರದ ನೆರೆಪೀಡಿತ ಸುಮಾರು 23 ಗ್ರಾಮಗಳ ಸವಳು ಜವಳಿನ ಅಭಿವೃದ್ಧಿ ಯೋಜನೆ ಹಾಗೂ ಬರಪೀಡಿತ ಭಾಗವಾದ ಕಕಮರಿ ಕೊಟ್ಟಲಗಿ ಏತನೀರಾವರಿ ಸುಮಾರು 948 ಕೋಟಿ ರೂಪಾಯಿ ಬೋರ್ಡ್ ಕ್ಲಿಯರನ್ಸ್ ಆಗಿದ್ದು ಅದನ್ನು ಕೂಡ ಬಹುಬೇಗನೆ ಮುಗಿಸಿಕೊಡುವ ಭರವಸೆ  ನೀಡಿದರು. ಮಹಾರಾಷ್ಟ್ರದಿಂದ ಬೇಸಿಗೆ ಕಾಲದಲ್ಲಿ ಕೃಷ್ಣಾನದಿಗೆ ಸುಮಾರು 4 ಟಿಎಂಸಿ ನೀರು ತರುವ ನಿರೀಕ್ಷೆಯಲ್ಲಿದ್ದೇವೆ ಎಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು ಇದೇ ಸಂದರ್ಭದಲ್ಲಿ ಬಿಜೆಪಿ ಯುವ ಮುಖಂಡರಾದ ವಿವೇಕ್ ನರಗೊಂಡ್ ಮಾತನಾಡಿ,ಶಾಸಕ ಮಹೇಶ್ ಕುಮಠಳ್ಳಿ ಅವರ ಕಾರ್ಯಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಬರುವ ದಿನಮಾನಗಳಲ್ಲಿ ಇನ್ನು ಹೆಚ್ಚಿನ ಅಭಿವೃದ್ಧಿ ಯೋಜನೆಗಳ ನಿರೀಕ್ಷೆಯಲ್ಲಿದ್ದೇವೆ ಪೂರ್ಣಗೊಳಿಸುತ್ತಾರೆ ಎನ್ನುವ ಭರವಸೆಯೂ ಇದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು