7:05 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಅಥಣಿ: ಅಗ್ನಿಶಾಮಕ ದಳ ಸಿಬ್ಬಂದಿಗಳ ತಾಸಿನ ಕಾರ್ಯಾಚರಣೆ; ಬಾವಿಗೆ ಬಿದ್ದ ಜರ್ಸಿ ಆಕಳು ಬಚಾವ್

27/08/2021, 21:54

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ತೆವರಟ್ಟಿ ಗ್ರಾಮದಲ್ಲಿ ಬಾವಿಗೆ ಬಿದ್ದ ಜರ್ಸಿ  ಆಕಳನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳ ಒಂದು ತಾಸಿಗೂ ಅಧಿಕ ಕಾರ್ಯಾಚರಣೆಯಲ್ಲಿ ಬಚಾವ್ ಮಾಡಿದ್ದಾರೆ.

ಮಹಾದೇವ್ ತಮ್ಮಣ್ಣ ಖೋತ್ ಎಂಬವರ ಜರ್ಸಿ ಆಕಳು ಅವರದೇ ಆದ ಬಾವಿಗೆ ಬಿದ್ದಿತ್ತು.ಬಾವಿ ಪಕ್ಕದಲ್ಲಿ ಮೇಯಲು ಹೋದ ದನ ಆಕಸ್ಮಿಕ ಕಾಲು ಜಾರಿ ಬಾವಿಗೆ ಬಿದ್ದಿತ್ತು. ತಕ್ಷಣ ಅಥಣಿ ಅಗ್ನಿಶಾಮಕ ಠಾಣೆಗೆ ವಿಷಯ ತಿಳಿಸಲಾಯಿತು. ತಕ್ಷಣ ಜಲ ವಾಹನ ಹಾಗೂ ಸಿಬ್ಬಂದಿಗೆ ಘಟನಾ ಸ್ಥಳಕ್ಕೆ ಆಗಮಿಸಿದರು. ಸುಮಾರು 30 x 40 ಅಳತೆಯ 90 ಪುಟ ಆಳವಿರುವ ಬಾವಿಯಲ್ಲಿ ಬಿದ್ದಿರುವ ಆಕಳನ್ನು ಸುಮಾರು ಒಂದು ತಾಸು ಇಪ್ಪತ್ತು ನಿಮಿಷಗಳ ಕಾಲ ಕಾರ್ಯಾಚರಣೆಯ ಬಳಿಕ ಬಾವಿಯಿಂದ ಸುರಕ್ಷಿತವಾಗಿ ಮೇಲಕ್ಕೆತ್ತಲಾಗಿದೆ.  

ರಕ್ಷಣಾ ಕಾರ್ಯಾಚರಣೆಯಲ್ಲಿ ಅನಿಲ್ ಬಡಚಿ (ಪ್ರಮುಖ ಅಗ್ನಿಶಾಮಕ ), ನೀಲಪ್ಪ ಹೇರವಾಡೆ (ಅಗ್ನಿಶಾಮಕ ಚಾಲಕ), ಅಗ್ನಿ ಶಾಮಕರಾದ ಶಿವಾನಂದ ಪೂಜಾರಿ, ಸಂಜೀವ ಚೌಗಲಾ, ರವೀಂದ್ರ, ಸಂಗಮ್,  ಸುರೇಶ್ ಮಾದರ್ ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು