8:29 AM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಅಥಣಿ: ಅಗ್ನಿಶಾಮಕ ದಳ ಸಿಬ್ಬಂದಿಗಳ ತಾಸಿನ ಕಾರ್ಯಾಚರಣೆ; ಬಾವಿಗೆ ಬಿದ್ದ ಜರ್ಸಿ ಆಕಳು ಬಚಾವ್

27/08/2021, 21:54

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ತೆವರಟ್ಟಿ ಗ್ರಾಮದಲ್ಲಿ ಬಾವಿಗೆ ಬಿದ್ದ ಜರ್ಸಿ  ಆಕಳನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳ ಒಂದು ತಾಸಿಗೂ ಅಧಿಕ ಕಾರ್ಯಾಚರಣೆಯಲ್ಲಿ ಬಚಾವ್ ಮಾಡಿದ್ದಾರೆ.

ಮಹಾದೇವ್ ತಮ್ಮಣ್ಣ ಖೋತ್ ಎಂಬವರ ಜರ್ಸಿ ಆಕಳು ಅವರದೇ ಆದ ಬಾವಿಗೆ ಬಿದ್ದಿತ್ತು.ಬಾವಿ ಪಕ್ಕದಲ್ಲಿ ಮೇಯಲು ಹೋದ ದನ ಆಕಸ್ಮಿಕ ಕಾಲು ಜಾರಿ ಬಾವಿಗೆ ಬಿದ್ದಿತ್ತು. ತಕ್ಷಣ ಅಥಣಿ ಅಗ್ನಿಶಾಮಕ ಠಾಣೆಗೆ ವಿಷಯ ತಿಳಿಸಲಾಯಿತು. ತಕ್ಷಣ ಜಲ ವಾಹನ ಹಾಗೂ ಸಿಬ್ಬಂದಿಗೆ ಘಟನಾ ಸ್ಥಳಕ್ಕೆ ಆಗಮಿಸಿದರು. ಸುಮಾರು 30 x 40 ಅಳತೆಯ 90 ಪುಟ ಆಳವಿರುವ ಬಾವಿಯಲ್ಲಿ ಬಿದ್ದಿರುವ ಆಕಳನ್ನು ಸುಮಾರು ಒಂದು ತಾಸು ಇಪ್ಪತ್ತು ನಿಮಿಷಗಳ ಕಾಲ ಕಾರ್ಯಾಚರಣೆಯ ಬಳಿಕ ಬಾವಿಯಿಂದ ಸುರಕ್ಷಿತವಾಗಿ ಮೇಲಕ್ಕೆತ್ತಲಾಗಿದೆ.  

ರಕ್ಷಣಾ ಕಾರ್ಯಾಚರಣೆಯಲ್ಲಿ ಅನಿಲ್ ಬಡಚಿ (ಪ್ರಮುಖ ಅಗ್ನಿಶಾಮಕ ), ನೀಲಪ್ಪ ಹೇರವಾಡೆ (ಅಗ್ನಿಶಾಮಕ ಚಾಲಕ), ಅಗ್ನಿ ಶಾಮಕರಾದ ಶಿವಾನಂದ ಪೂಜಾರಿ, ಸಂಜೀವ ಚೌಗಲಾ, ರವೀಂದ್ರ, ಸಂಗಮ್,  ಸುರೇಶ್ ಮಾದರ್ ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು