6:46 PM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಅಥಣಿ: ಅಗ್ನಿಶಾಮಕ ದಳ ಸಿಬ್ಬಂದಿಗಳ ತಾಸಿನ ಕಾರ್ಯಾಚರಣೆ; ಬಾವಿಗೆ ಬಿದ್ದ ಜರ್ಸಿ ಆಕಳು ಬಚಾವ್

27/08/2021, 21:54

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ತೆವರಟ್ಟಿ ಗ್ರಾಮದಲ್ಲಿ ಬಾವಿಗೆ ಬಿದ್ದ ಜರ್ಸಿ  ಆಕಳನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳ ಒಂದು ತಾಸಿಗೂ ಅಧಿಕ ಕಾರ್ಯಾಚರಣೆಯಲ್ಲಿ ಬಚಾವ್ ಮಾಡಿದ್ದಾರೆ.

ಮಹಾದೇವ್ ತಮ್ಮಣ್ಣ ಖೋತ್ ಎಂಬವರ ಜರ್ಸಿ ಆಕಳು ಅವರದೇ ಆದ ಬಾವಿಗೆ ಬಿದ್ದಿತ್ತು.ಬಾವಿ ಪಕ್ಕದಲ್ಲಿ ಮೇಯಲು ಹೋದ ದನ ಆಕಸ್ಮಿಕ ಕಾಲು ಜಾರಿ ಬಾವಿಗೆ ಬಿದ್ದಿತ್ತು. ತಕ್ಷಣ ಅಥಣಿ ಅಗ್ನಿಶಾಮಕ ಠಾಣೆಗೆ ವಿಷಯ ತಿಳಿಸಲಾಯಿತು. ತಕ್ಷಣ ಜಲ ವಾಹನ ಹಾಗೂ ಸಿಬ್ಬಂದಿಗೆ ಘಟನಾ ಸ್ಥಳಕ್ಕೆ ಆಗಮಿಸಿದರು. ಸುಮಾರು 30 x 40 ಅಳತೆಯ 90 ಪುಟ ಆಳವಿರುವ ಬಾವಿಯಲ್ಲಿ ಬಿದ್ದಿರುವ ಆಕಳನ್ನು ಸುಮಾರು ಒಂದು ತಾಸು ಇಪ್ಪತ್ತು ನಿಮಿಷಗಳ ಕಾಲ ಕಾರ್ಯಾಚರಣೆಯ ಬಳಿಕ ಬಾವಿಯಿಂದ ಸುರಕ್ಷಿತವಾಗಿ ಮೇಲಕ್ಕೆತ್ತಲಾಗಿದೆ.  

ರಕ್ಷಣಾ ಕಾರ್ಯಾಚರಣೆಯಲ್ಲಿ ಅನಿಲ್ ಬಡಚಿ (ಪ್ರಮುಖ ಅಗ್ನಿಶಾಮಕ ), ನೀಲಪ್ಪ ಹೇರವಾಡೆ (ಅಗ್ನಿಶಾಮಕ ಚಾಲಕ), ಅಗ್ನಿ ಶಾಮಕರಾದ ಶಿವಾನಂದ ಪೂಜಾರಿ, ಸಂಜೀವ ಚೌಗಲಾ, ರವೀಂದ್ರ, ಸಂಗಮ್,  ಸುರೇಶ್ ಮಾದರ್ ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು