3:36 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಅಥಣಿ: ಅರಣ್ಯ ಇಲಾಖೆಯ ಕಾರ್ಯಾಚರಣೆ; ಸೆರೆಸಿಕ್ಕ ಕತ್ತೆ ಕಿರುಬ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

07/11/2022, 10:08

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ‌ ಪಟ್ಟಣದ ಹೊರವಲಯದಲ್ಲಿ ಇರುವ ಶಿವಯೋಗಿ‌ ನಗರದ, ಕುಮಠಳ್ಳಿ ಫಾರ್ಮಹೌಸ್ ನಲ್ಲಿ ಕತ್ತೆ ಕಿರುಬ ಒಂದು ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿಸಿತ್ತು, ಕತ್ತೆ ಕಿರುಬವನ್ನ ದೂರದಿಂದ ನೋಡಿದ ಸಾರ್ವಜನಿಕರು ಚಿರತೆ ಬಂದಿದೆ ಎಂದು ವದಂತಿ ಹಬ್ಬಿಸಿದ್ದು ಅಥಣಿ ಪ್ರಾದೇಶಿಕ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳೀಯರ ಸಹಕಾರದಿಂದ ಕಾರ್ಯಾಚರಣೆ ನಡೆಸಿ ಬೋನಿಗೆ ಬೀಳಿಸುವಲ್ಲಿ ಯಶಸ್ವಿಯಾದರು.


ಈ ಹಿಂದೆ ಅಥಣಿ ಮತ್ತು ಕಾಗವಾಡ ತಾಲೂಕಿನ ಹಲವು ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡ ವದಂತಿ ಹಬ್ಬಿದ್ದು ಸ್ಥಳಕ್ಕೆ ಭೇಟಿ ನೀಡಿ ಹೆಜ್ಜೆ ಗುರುತುಗಳನ್ನು ಪರಿಶೀಲಿಸಿದ್ದ ಅರಣ್ಯ ಇಲಾಖೆಯ ಸಿಬ್ಬಂದಿ ಇದು ಕತ್ತೆ ಕಿರುಬದ ಹೆಜ್ಜೆ ಎಂದು ಹೇಳಿದ್ದರು. ಸದ್ಯ ಅಥಣಿ ಶಾಸಕ ಮಹೇಶ್ ಕುಮಠಳ್ಳಿಯವರ ಫಾರ್ಮಹೌಸ್ ನಲ್ಲಿ ಪತ್ತೆಯಾದ ಕತ್ತೆ ಕಿರುಬವನ್ನು ಸತತವಾಗಿ ಎರಡು ಗಂಟೆ ಯಶಸ್ವಿ ಕಾರ್ಯಾಚರಣೆ ಮಾಡಿ ಹಿಡಿದು ಸಾರ್ವಜನಿಕರ ಆತಂಕ ದೂರ ಮಾಡಿದ್ದಾರೆ.

ಈ ಕುರಿತು ಮಾತನಾಡಿದ ಅರಣ್ಯಾಧಿಕಾರಿ ಪ್ರಶಾಂತ ಗಾಣಿಗೇರ ಅವರು ಕತ್ತೆ ಕಿರುಬು ಕಾಣಿಸಿಕೊಂಡ ಕರೆ ಬಂದ ನಂತರ ಯಶಸ್ವಿಯಾಗಿ ಹಿಡಿದಿದ್ದಾರೆ ಜೊತೆಗೆ ಅಥಣಿ ತಾಲೂಕಿನ ವ್ಯಾಪ್ತಿಯಲ್ಲಿ ಎಲ್ಲಿಯೂ ಚಿರತೆ ಬಂದಿಲ್ಲ ಇದು ಕತ್ತೆ ಕಿರುಬದ ಹೆಜ್ಜೆ ಗುರುತುಗಳಾಗಿದ್ದು ಒಂದು ವೇಳೆ ಕಾಡು ಪ್ರಾಣಿಗಳು ಕಂಡುಬಂದಲ್ಲಿ ಭಯಬೀತರಾಗದೆ ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರುವಂತೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು