ಇತ್ತೀಚಿನ ಸುದ್ದಿ
ಅಥಣಿ: ಅವಿವಾಹಿತ ಯುವತಿ ವಿಷ ಸೇವಿಸಿ ಆತ್ಮಹತ್ಯೆ; ಕಾರಣ ಇನ್ನೂ ನಿಗೂಢ
27/01/2023, 22:27

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ವಿಷ ಸೇವಿಸಿ ಅವಿವಾಹಿತ ಯುವತಿಯೊಬ್ಬಳು ಅತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ತೇಜಸ್ವಿನಿ ಗಂಗಾರಾಮ ಗುಜ್ಜರ್ (21) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ಗುರುತಿಸಲಾಗಿದೆ. ಕೀಟನಾಶಕ ಔಷಧಿ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಮೃತ ಯುವತಿ ಅಥಣಿಯ ಖಾಸಗಿ ಆಸ್ಪತ್ರೆಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕೆಲಸ ಮಾಡುತ್ತಿದ್ದಳು.
ಎಂದಿನಂತೆ ಮುಂಜಾನೆ 8 ಗಂಟೆಗೆ ಕೆಲಸಕ್ಕೆ ಹೋಗುತ್ತೇನೆ ಅಂತಾ ಹೇಳಿ ಹೋದವಳು ಮತ್ತೆ ವಾಪಸ್ ಮನೆಗೆ ಬಂದು ವಿಷ ಸೇವಿಸಿದ್ದಾಳೆ ಅಂತಾ ಮೃತಳ ತಾಯಿ ಹೇಳಿದ್ದಾರೆ. ಸಾವಿಗೆ ನಿಖರ ಕಾರಣ ವೇನುವೆಂಬುವುದು ತಿಳಿದು ಬಂದಿಲ್ಲ.ಸದ್ಯ ಪ್ರೀತಿಯಿಂದ ಸಾಕಿ ಬೆಳೆಸಿದ ಮಗಳನ್ನ ಕಡಿದುಕೊಂಡ ಕುಟುಂಬಸ್ಥರ ಆಕ್ರಂದ್ರಣ ಮುಗಿಲು ಮುಟ್ಟಿದೆ.
ಪ್ರಕರಣ ದಾಖಲಿಸಿಕೊಂಡ ಅಥಣಿ ಪೊಲೀಸರು ತಂದೆ ತಾಯಿಯ ಹೇಳಿಕೆ ಹಾಗೂ ಯುವತಿ ಬಳಸುತ್ತಿದ್ದ ಮೊಬೈಲ್ ಪರಿಶೀಲಿಸುತ್ತಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ವೆನುವೆಂಬುವುದು ಪೊಲೀಸ್ ತನಿಖೆ ನಂತರ ಸತ್ಯಾ ಸತ್ಯತೆ ಗೊತ್ತಾಗಲಿದೆ.ಮರಣೋತ್ತರ ಪರೀಕ್ಷೆ ನಂತರ ಮೃತ ದೇಹವನ್ನು ಕುಟುಂಬಸ್ಥರಿಗೆ ನೀಡಲಿದ್ದಾರೆ..