1:48 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಅಥಣಿ: ಅವಿವಾಹಿತ ಯುವತಿ ವಿಷ ಸೇವಿಸಿ ಆತ್ಮಹತ್ಯೆ; ಕಾರಣ ಇನ್ನೂ ನಿಗೂಢ

27/01/2023, 22:27

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ವಿಷ ಸೇವಿಸಿ ಅವಿವಾಹಿತ ಯುವತಿಯೊಬ್ಬಳು ಅತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ತೇಜಸ್ವಿನಿ ಗಂಗಾರಾಮ ಗುಜ್ಜರ್ (21) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ಗುರುತಿಸಲಾಗಿದೆ. ಕೀಟನಾಶಕ ಔಷಧಿ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಮೃತ ಯುವತಿ ಅಥಣಿಯ ಖಾಸಗಿ ಆಸ್ಪತ್ರೆಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕೆಲಸ ಮಾಡುತ್ತಿದ್ದಳು.

ಎಂದಿನಂತೆ ಮುಂಜಾನೆ 8 ಗಂಟೆಗೆ ಕೆಲಸಕ್ಕೆ ಹೋಗುತ್ತೇನೆ ಅಂತಾ ಹೇಳಿ ಹೋದವಳು ಮತ್ತೆ ವಾಪಸ್ ಮನೆಗೆ ಬಂದು ವಿಷ ಸೇವಿಸಿದ್ದಾಳೆ ಅಂತಾ ಮೃತಳ ತಾಯಿ ಹೇಳಿದ್ದಾರೆ. ಸಾವಿಗೆ ನಿಖರ ಕಾರಣ ವೇನುವೆಂಬುವುದು ತಿಳಿದು ಬಂದಿಲ್ಲ.ಸದ್ಯ ಪ್ರೀತಿಯಿಂದ ಸಾಕಿ ಬೆಳೆಸಿದ ಮಗಳನ್ನ ಕಡಿದುಕೊಂಡ ಕುಟುಂಬಸ್ಥರ ಆಕ್ರಂದ್ರಣ ಮುಗಿಲು ಮುಟ್ಟಿದೆ.
ಪ್ರಕರಣ ದಾಖಲಿಸಿಕೊಂಡ ಅಥಣಿ ಪೊಲೀಸರು ತಂದೆ ತಾಯಿಯ ಹೇಳಿಕೆ ಹಾಗೂ ಯುವತಿ ಬಳಸುತ್ತಿದ್ದ ಮೊಬೈಲ್ ಪರಿಶೀಲಿಸುತ್ತಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ವೆನುವೆಂಬುವುದು ಪೊಲೀಸ್ ತನಿಖೆ ನಂತರ ಸತ್ಯಾ ಸತ್ಯತೆ ಗೊತ್ತಾಗಲಿದೆ.ಮರಣೋತ್ತರ ಪರೀಕ್ಷೆ ನಂತರ ಮೃತ ದೇಹವನ್ನು ಕುಟುಂಬಸ್ಥರಿಗೆ ನೀಡಲಿದ್ದಾರೆ..

ಇತ್ತೀಚಿನ ಸುದ್ದಿ

ಜಾಹೀರಾತು