4:27 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಅಥಣಿ: ಅವಿವಾಹಿತ ಯುವತಿ ವಿಷ ಸೇವಿಸಿ ಆತ್ಮಹತ್ಯೆ; ಕಾರಣ ಇನ್ನೂ ನಿಗೂಢ

27/01/2023, 22:27

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ವಿಷ ಸೇವಿಸಿ ಅವಿವಾಹಿತ ಯುವತಿಯೊಬ್ಬಳು ಅತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ತೇಜಸ್ವಿನಿ ಗಂಗಾರಾಮ ಗುಜ್ಜರ್ (21) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ಗುರುತಿಸಲಾಗಿದೆ. ಕೀಟನಾಶಕ ಔಷಧಿ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಮೃತ ಯುವತಿ ಅಥಣಿಯ ಖಾಸಗಿ ಆಸ್ಪತ್ರೆಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕೆಲಸ ಮಾಡುತ್ತಿದ್ದಳು.

ಎಂದಿನಂತೆ ಮುಂಜಾನೆ 8 ಗಂಟೆಗೆ ಕೆಲಸಕ್ಕೆ ಹೋಗುತ್ತೇನೆ ಅಂತಾ ಹೇಳಿ ಹೋದವಳು ಮತ್ತೆ ವಾಪಸ್ ಮನೆಗೆ ಬಂದು ವಿಷ ಸೇವಿಸಿದ್ದಾಳೆ ಅಂತಾ ಮೃತಳ ತಾಯಿ ಹೇಳಿದ್ದಾರೆ. ಸಾವಿಗೆ ನಿಖರ ಕಾರಣ ವೇನುವೆಂಬುವುದು ತಿಳಿದು ಬಂದಿಲ್ಲ.ಸದ್ಯ ಪ್ರೀತಿಯಿಂದ ಸಾಕಿ ಬೆಳೆಸಿದ ಮಗಳನ್ನ ಕಡಿದುಕೊಂಡ ಕುಟುಂಬಸ್ಥರ ಆಕ್ರಂದ್ರಣ ಮುಗಿಲು ಮುಟ್ಟಿದೆ.
ಪ್ರಕರಣ ದಾಖಲಿಸಿಕೊಂಡ ಅಥಣಿ ಪೊಲೀಸರು ತಂದೆ ತಾಯಿಯ ಹೇಳಿಕೆ ಹಾಗೂ ಯುವತಿ ಬಳಸುತ್ತಿದ್ದ ಮೊಬೈಲ್ ಪರಿಶೀಲಿಸುತ್ತಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ವೆನುವೆಂಬುವುದು ಪೊಲೀಸ್ ತನಿಖೆ ನಂತರ ಸತ್ಯಾ ಸತ್ಯತೆ ಗೊತ್ತಾಗಲಿದೆ.ಮರಣೋತ್ತರ ಪರೀಕ್ಷೆ ನಂತರ ಮೃತ ದೇಹವನ್ನು ಕುಟುಂಬಸ್ಥರಿಗೆ ನೀಡಲಿದ್ದಾರೆ..

ಇತ್ತೀಚಿನ ಸುದ್ದಿ

ಜಾಹೀರಾತು