3:27 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಅಥಣಿ: ಬಟ್ಟೆ ಬಗೆಯಲು ತೆರಳಿದ್ದ ಒಂದೇ ಕುಟುಂಬದ 4 ಮಂದಿ ಸಹೋದರರು ನೀರುಪಾಲು; ಅಗ್ನಿಶಾಮಕ ದಳದಿಂದ ಶೋಧ

28/06/2021, 17:42

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಕೃಷ್ಣಾ ನದಿಗೆ ಬಟ್ಟೆ ಒಗೆಯಲು ತೆರಳಿದ ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಸಹೋದರರು ಕಾಲು ಜಾರಿ ನೀರು ಪಾಲಾದ ದಾರುಣ ಘಟನೆ ಸೋಮವಾರ ನಡೆದಿದೆ.

ಮೃತಪಟ್ಟವರನ್ನು ಪರಶುರಾಮ್ ಗೋಪಾಲ್ ಬನಸೊಡೆ, ಸದಾಶಿವ ಗೋಪಾಲ್ ಬನಸೊಡೆ, ಶಂಕರ್ ಗೋಪಾಲ ಬನಸೊಡೆ ಹಾಗೂ ಧರೆಪ್ಪ ಗೋಪಾಲ ಬನಸೊಡೆ ಎಂದು ಗುರುತಿಸಲಾಗಿದೆ. ಈ ನಾಲ್ವರು ಸಹೋದರರು ಸೋಮವಾರ ಮಧ್ಯಾಹ್ನ ಮನೆ ಸಮೀಪದ ಕೃಷ್ಣಾ ನದಿಗೆ ಬಟ್ಟೆ ಒಗೆಯಲೆಂದು ತೆರಳಿದ್ದರು. ನದಿ ದಂಡೆಯಲ್ಲಿ ಬಟ್ಟೆ ತೊಳೆಯುವಾಗ ಕಾಲು ಜಾರಿ ಒಬ್ಬಾತ ಬಿದ್ದಾಗ ಆತನ ರಕ್ಷಣೆಗೆಂದು ಇತರ ಮೂವರು ಸಹೋದರರು ನೀರಿಗೆ ಹಾರಿದ್ದರು. ಈ ನಾಲ್ವರಲ್ಲಿ 


ಒಬ್ಬಾತನಿಗೆ ಮಾತ್ರ ಈಜಲು ಬರುತ್ತಿತ್ತು. ಈಜು ಬಾರದ ಇತರ ಮೂವರು ಸಹೋದರರು ಪ್ರಾಣಭೀತಿಯಿಂದ ಆತನನ್ನು ತಬ್ಬಿಕೊಂಡಿರುವುದರಿಂದ ನಾಲ್ವರು ಸಹೋದರರು ಒಟ್ಟಿಗೆ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.


ಅಥಣಿ ತಾಲೂಕ ದಂಡಡಿಖಾರಿ ದುಂಡಪ್ಪ ಕೋಮಾರ ಹಾಗೂ ಅಥಣಿ ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳ ಶೋಧ ಶೋಧ ಕಾರ್ಯ ನಡೆಸುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು