3:59 PM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಅಥಣಿ: ಬಟ್ಟೆ ಬಗೆಯಲು ತೆರಳಿದ್ದ ಒಂದೇ ಕುಟುಂಬದ 4 ಮಂದಿ ಸಹೋದರರು ನೀರುಪಾಲು; ಅಗ್ನಿಶಾಮಕ ದಳದಿಂದ ಶೋಧ

28/06/2021, 17:42

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಕೃಷ್ಣಾ ನದಿಗೆ ಬಟ್ಟೆ ಒಗೆಯಲು ತೆರಳಿದ ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಸಹೋದರರು ಕಾಲು ಜಾರಿ ನೀರು ಪಾಲಾದ ದಾರುಣ ಘಟನೆ ಸೋಮವಾರ ನಡೆದಿದೆ.

ಮೃತಪಟ್ಟವರನ್ನು ಪರಶುರಾಮ್ ಗೋಪಾಲ್ ಬನಸೊಡೆ, ಸದಾಶಿವ ಗೋಪಾಲ್ ಬನಸೊಡೆ, ಶಂಕರ್ ಗೋಪಾಲ ಬನಸೊಡೆ ಹಾಗೂ ಧರೆಪ್ಪ ಗೋಪಾಲ ಬನಸೊಡೆ ಎಂದು ಗುರುತಿಸಲಾಗಿದೆ. ಈ ನಾಲ್ವರು ಸಹೋದರರು ಸೋಮವಾರ ಮಧ್ಯಾಹ್ನ ಮನೆ ಸಮೀಪದ ಕೃಷ್ಣಾ ನದಿಗೆ ಬಟ್ಟೆ ಒಗೆಯಲೆಂದು ತೆರಳಿದ್ದರು. ನದಿ ದಂಡೆಯಲ್ಲಿ ಬಟ್ಟೆ ತೊಳೆಯುವಾಗ ಕಾಲು ಜಾರಿ ಒಬ್ಬಾತ ಬಿದ್ದಾಗ ಆತನ ರಕ್ಷಣೆಗೆಂದು ಇತರ ಮೂವರು ಸಹೋದರರು ನೀರಿಗೆ ಹಾರಿದ್ದರು. ಈ ನಾಲ್ವರಲ್ಲಿ 


ಒಬ್ಬಾತನಿಗೆ ಮಾತ್ರ ಈಜಲು ಬರುತ್ತಿತ್ತು. ಈಜು ಬಾರದ ಇತರ ಮೂವರು ಸಹೋದರರು ಪ್ರಾಣಭೀತಿಯಿಂದ ಆತನನ್ನು ತಬ್ಬಿಕೊಂಡಿರುವುದರಿಂದ ನಾಲ್ವರು ಸಹೋದರರು ಒಟ್ಟಿಗೆ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.


ಅಥಣಿ ತಾಲೂಕ ದಂಡಡಿಖಾರಿ ದುಂಡಪ್ಪ ಕೋಮಾರ ಹಾಗೂ ಅಥಣಿ ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳ ಶೋಧ ಶೋಧ ಕಾರ್ಯ ನಡೆಸುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು