5:29 AM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಅಥಣಿ: ಬಟ್ಟೆ ಬಗೆಯಲು ತೆರಳಿದ್ದ ಒಂದೇ ಕುಟುಂಬದ 4 ಮಂದಿ ಸಹೋದರರು ನೀರುಪಾಲು; ಅಗ್ನಿಶಾಮಕ ದಳದಿಂದ ಶೋಧ

28/06/2021, 17:42

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಕೃಷ್ಣಾ ನದಿಗೆ ಬಟ್ಟೆ ಒಗೆಯಲು ತೆರಳಿದ ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಸಹೋದರರು ಕಾಲು ಜಾರಿ ನೀರು ಪಾಲಾದ ದಾರುಣ ಘಟನೆ ಸೋಮವಾರ ನಡೆದಿದೆ.

ಮೃತಪಟ್ಟವರನ್ನು ಪರಶುರಾಮ್ ಗೋಪಾಲ್ ಬನಸೊಡೆ, ಸದಾಶಿವ ಗೋಪಾಲ್ ಬನಸೊಡೆ, ಶಂಕರ್ ಗೋಪಾಲ ಬನಸೊಡೆ ಹಾಗೂ ಧರೆಪ್ಪ ಗೋಪಾಲ ಬನಸೊಡೆ ಎಂದು ಗುರುತಿಸಲಾಗಿದೆ. ಈ ನಾಲ್ವರು ಸಹೋದರರು ಸೋಮವಾರ ಮಧ್ಯಾಹ್ನ ಮನೆ ಸಮೀಪದ ಕೃಷ್ಣಾ ನದಿಗೆ ಬಟ್ಟೆ ಒಗೆಯಲೆಂದು ತೆರಳಿದ್ದರು. ನದಿ ದಂಡೆಯಲ್ಲಿ ಬಟ್ಟೆ ತೊಳೆಯುವಾಗ ಕಾಲು ಜಾರಿ ಒಬ್ಬಾತ ಬಿದ್ದಾಗ ಆತನ ರಕ್ಷಣೆಗೆಂದು ಇತರ ಮೂವರು ಸಹೋದರರು ನೀರಿಗೆ ಹಾರಿದ್ದರು. ಈ ನಾಲ್ವರಲ್ಲಿ 


ಒಬ್ಬಾತನಿಗೆ ಮಾತ್ರ ಈಜಲು ಬರುತ್ತಿತ್ತು. ಈಜು ಬಾರದ ಇತರ ಮೂವರು ಸಹೋದರರು ಪ್ರಾಣಭೀತಿಯಿಂದ ಆತನನ್ನು ತಬ್ಬಿಕೊಂಡಿರುವುದರಿಂದ ನಾಲ್ವರು ಸಹೋದರರು ಒಟ್ಟಿಗೆ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.


ಅಥಣಿ ತಾಲೂಕ ದಂಡಡಿಖಾರಿ ದುಂಡಪ್ಪ ಕೋಮಾರ ಹಾಗೂ ಅಥಣಿ ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳ ಶೋಧ ಶೋಧ ಕಾರ್ಯ ನಡೆಸುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು