3:12 AM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಅಥಣಿ: ಗೃಹ ಸಚಿವ ಡಾ. ಪರಮೇಶ್ವರ್, ಸಚಿವ ನಾಗೇಂದ್ರ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

02/06/2024, 22:18

ಸಂತೋಷ್ ಹನಮಂತ ಹೊಸಟ್ಟಿ ಬೆಳಗಾವಿ

info.reporterkarnataka@gmail.com

ವಾಲ್ಮೀಕಿ ನಿಗಮದ ಅಧೀಕ್ಷಕ ಪಿ. ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣ ಹಾಗೂ ಚನ್ನಗಿರಿ ಪೋಲೀಸ್ ಠಾಣೆಯ ಮೇಲೆ ಸಮಾಜಘಾತುಕರು ಕಲ್ಲು ತೂರಾಟ ನಡೆಸಿದ ಘಟನೆಯು ರಾಜ್ಯ ಸರಕಾರದ ವೈಫಲ್ಯದ ಫಲ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಅಥಣಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ವಾಲ್ಮೀಕಿ ನಿಗಮದ ಅಧೀಕ್ಷಕ ಶಿವಮೊಗ್ಗದ ಪಿ. ಚಂದ್ರಶೇಖರನ್ ಇತ್ತೀಚೆಗೆ ನೇಣಿಗೆ ಶರಣಾಗಿದ್ದಾರೆ. ವಾಲ್ಮೀಕ ನಿಗಮದ ವ್ಯವಸ್ಥಾಪಕ ಮತ್ತು ಹಿರಿಯ ಅಧಿಕಾರಿಗಳು ಅವರಿಗೆ ಕಿರುಕುಳ ಕೊಟ್ಟು ಸುಮಾರು 184 ಕೋಟಿ ರೂಪಾಯಿಗಳನ್ನು ಕಾನೂನು ಬಾಹೀರವಾಗಿ ಪರಭಾರೆ ಮಾಡಿದ್ದರಿಂದ ಅವರುಗಳ ಹೆಸರುಗಳನ್ನು ಡೆತ್‌ನೋಟನಲ್ಲಿ ಬರೆದಿಟ್ಟು ಅವರು ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ. ಹಾಗೆ ದಾವಣಗೆರೆಯ ಚನ್ನಗಿರಿ ತಾಲೂಕಿನಲ್ಲಿ ಪೋಲೀಸ್ ಠಾಣೆಯ ಮೇಲೆ ಸಮಾಜ ಘಾತುಕರು ಕಲ್ಲು ತೂರಾಟ ಮಾಡಿದ್ದಾರೆ. ಒಬ್ಬ ಮಟ್ಕಾ ಬುಕ್ಕಿಯು ಹೃದಯಾಘಾತದಿಂದ ಪೋಲೀಸ ಠಾಣೆಯಲ್ಲಿ ಮೃತಪಟ್ಟಿದ್ದನೆನ್ನಲಾಗಿದೆ. ಈ ಎರಡೂ ಘಟನೆಗಳು ಕಾಂಗ್ರೆಸ್ ಸರಕಾರ ಎಲ್ಲಾ ರಂಗಗಳಲ್ಲಿ ವಿಫಲವಾಗಿದ್ದನ್ನು ತೋರಿಸುತ್ತದೆ. ಕಾರಣ ಗೃಹ ಸಚಿವರು ಮತ್ತು ವಾಲ್ಮೀಕಿ ನಿಗಮದ ಹೊಣೆ ಹೊತ್ತ ನಾಗೇಂದ್ರ‌ ಅವರು ರಾಜೀನಾಮೆ ನೀಡಬೇಕು. ಈ ಪ್ರಕರಣಗಳನ್ನು ಕಾನೂನಿನ ಅನ್ವಯ ತನಿಖೆ ನಡೆಸಬೇಕು.ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಡಾ.ರವಿ ಸಂಕ, ಶಿವ ಪ್ರಸನ್ನ (ಪುಟ್ಟು) ಹಿರೇಮಠ್,ಪ್ರಧಾನ ಕಾರ್ಯದರ್ಶಿ ಸರಸ್ವತಿ ಮ. ನೇಮಗೌಡ.ತಾಲೂಕಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶಕುಂತಲಾ ಘರ್ಗೆ,ಶಿವಲೀಲಾ ಪಟ್ಟಣಶೆಟ್ಟಿ,ಸಿದ್ದಪ್ಪ ಮುದುಕನ್ನವರ್,ಗಿರೀಶ್ ಬಂದೋಲಿ ಬುಟಾಳಿ,ಉಮೇಶ್ ಬಂಟೊಡ್ಕರ್,ರವಿ ಪೂಜಾರಿ,ಸಿದ್ದು ಮಾಳಿ,ಸಂಪತ್ ಕುಮಾರ್ ಶೆಟ್ಟಿ ರಾಜೇಂದ್ರ ಐಹೊಳೆ,ಅನಿಲ್ ಭಜಂತ್ರಿ, ವಿನಾಯಕ ಪಾಟೀಲ್ ಹಾಗೂ ಬಿಜೆಪಿ ಕಾರ್ಯಕರ್ತರು, ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು