11:46 AM Saturday16 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಅಥಣಿ: ಗೃಹ ಸಚಿವ ಡಾ. ಪರಮೇಶ್ವರ್, ಸಚಿವ ನಾಗೇಂದ್ರ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

02/06/2024, 22:18

ಸಂತೋಷ್ ಹನಮಂತ ಹೊಸಟ್ಟಿ ಬೆಳಗಾವಿ

info.reporterkarnataka@gmail.com

ವಾಲ್ಮೀಕಿ ನಿಗಮದ ಅಧೀಕ್ಷಕ ಪಿ. ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣ ಹಾಗೂ ಚನ್ನಗಿರಿ ಪೋಲೀಸ್ ಠಾಣೆಯ ಮೇಲೆ ಸಮಾಜಘಾತುಕರು ಕಲ್ಲು ತೂರಾಟ ನಡೆಸಿದ ಘಟನೆಯು ರಾಜ್ಯ ಸರಕಾರದ ವೈಫಲ್ಯದ ಫಲ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಅಥಣಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ವಾಲ್ಮೀಕಿ ನಿಗಮದ ಅಧೀಕ್ಷಕ ಶಿವಮೊಗ್ಗದ ಪಿ. ಚಂದ್ರಶೇಖರನ್ ಇತ್ತೀಚೆಗೆ ನೇಣಿಗೆ ಶರಣಾಗಿದ್ದಾರೆ. ವಾಲ್ಮೀಕ ನಿಗಮದ ವ್ಯವಸ್ಥಾಪಕ ಮತ್ತು ಹಿರಿಯ ಅಧಿಕಾರಿಗಳು ಅವರಿಗೆ ಕಿರುಕುಳ ಕೊಟ್ಟು ಸುಮಾರು 184 ಕೋಟಿ ರೂಪಾಯಿಗಳನ್ನು ಕಾನೂನು ಬಾಹೀರವಾಗಿ ಪರಭಾರೆ ಮಾಡಿದ್ದರಿಂದ ಅವರುಗಳ ಹೆಸರುಗಳನ್ನು ಡೆತ್‌ನೋಟನಲ್ಲಿ ಬರೆದಿಟ್ಟು ಅವರು ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ. ಹಾಗೆ ದಾವಣಗೆರೆಯ ಚನ್ನಗಿರಿ ತಾಲೂಕಿನಲ್ಲಿ ಪೋಲೀಸ್ ಠಾಣೆಯ ಮೇಲೆ ಸಮಾಜ ಘಾತುಕರು ಕಲ್ಲು ತೂರಾಟ ಮಾಡಿದ್ದಾರೆ. ಒಬ್ಬ ಮಟ್ಕಾ ಬುಕ್ಕಿಯು ಹೃದಯಾಘಾತದಿಂದ ಪೋಲೀಸ ಠಾಣೆಯಲ್ಲಿ ಮೃತಪಟ್ಟಿದ್ದನೆನ್ನಲಾಗಿದೆ. ಈ ಎರಡೂ ಘಟನೆಗಳು ಕಾಂಗ್ರೆಸ್ ಸರಕಾರ ಎಲ್ಲಾ ರಂಗಗಳಲ್ಲಿ ವಿಫಲವಾಗಿದ್ದನ್ನು ತೋರಿಸುತ್ತದೆ. ಕಾರಣ ಗೃಹ ಸಚಿವರು ಮತ್ತು ವಾಲ್ಮೀಕಿ ನಿಗಮದ ಹೊಣೆ ಹೊತ್ತ ನಾಗೇಂದ್ರ‌ ಅವರು ರಾಜೀನಾಮೆ ನೀಡಬೇಕು. ಈ ಪ್ರಕರಣಗಳನ್ನು ಕಾನೂನಿನ ಅನ್ವಯ ತನಿಖೆ ನಡೆಸಬೇಕು.ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಡಾ.ರವಿ ಸಂಕ, ಶಿವ ಪ್ರಸನ್ನ (ಪುಟ್ಟು) ಹಿರೇಮಠ್,ಪ್ರಧಾನ ಕಾರ್ಯದರ್ಶಿ ಸರಸ್ವತಿ ಮ. ನೇಮಗೌಡ.ತಾಲೂಕಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶಕುಂತಲಾ ಘರ್ಗೆ,ಶಿವಲೀಲಾ ಪಟ್ಟಣಶೆಟ್ಟಿ,ಸಿದ್ದಪ್ಪ ಮುದುಕನ್ನವರ್,ಗಿರೀಶ್ ಬಂದೋಲಿ ಬುಟಾಳಿ,ಉಮೇಶ್ ಬಂಟೊಡ್ಕರ್,ರವಿ ಪೂಜಾರಿ,ಸಿದ್ದು ಮಾಳಿ,ಸಂಪತ್ ಕುಮಾರ್ ಶೆಟ್ಟಿ ರಾಜೇಂದ್ರ ಐಹೊಳೆ,ಅನಿಲ್ ಭಜಂತ್ರಿ, ವಿನಾಯಕ ಪಾಟೀಲ್ ಹಾಗೂ ಬಿಜೆಪಿ ಕಾರ್ಯಕರ್ತರು, ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು