9:39 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಅಥಣಿ: ಕಾಂಗ್ರೆಸ್ ನಿಂದ ಸತೀಶ್ ಜಾರಕಿಹೊಳಿ ಹುಟ್ಟುಹಬ್ಬ ಅಂಗವಾಗಿ ಕೊರೊನಾ ಸೇನಾನಿಗಳಿಗೆ ಊಟ

01/06/2021, 22:50

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಬ್ಲಾಕ್  ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಕೊರೊನಾ ವಾರಿಯರ್ ಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಅನಿಲ್ ಸುಣದೋಳಿ,  ಈ ಲಾಕ್ಡೌನ್ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್

ನಮಗಾಗಿ ಹಗಲು-ರಾತ್ರಿಯೆನ್ನದೆ ಕರ್ತವ್ಯದಲ್ಲಿ ನಿರತರಾಗಿದ್ದಾರೆ. ಅವರ ಒಂದು ಶ್ರಮಕ್ಕೆ ಈ ಒಂದು ಕಾರ್ಯಕ್ರಮದ ಮೂಲಕ ಧನ್ಯವಾದವನ್ನು ಸಲ್ಲಿಸಲಾಗುವುದು ಎಂದರು

ಅಥಣಿ ಪಟ್ಟಣದ ಪೊಲೀಸ್ ಠಾಣೆ, ಸಮುದಾಯ ಆರೋಗ್ಯ ಕೇಂದ್ರ, ಪುರಸಭೆ ಕಚೇರಿ ಹಾಗೂ ಸ್ನೇಹ ಜ್ಯೋತಿ ಅಂಧ ವಿದ್ಯಾರ್ಥಿಗಳ ಶಾಲೆಗಳಿಗೆ ಕಾಂಗ್ರೆಸ್ ಮುಖಂಡ ಧರೇಪ್ಪಾ ಠಕ್ಕನ್ನವರ ಅವರಿಂದ ಕೊರೊನಾ ಸೇನಾನಿಗಳಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿತು.

ಇದೇ ಸಂದರ್ಭದಲ್ಲಿ ಅಥಣಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಅನಿಲ್ ಸುಣದೋಳಿ, ನಿಶಾಂತ್ ದಳವಾಯಿ, ರವಿ ಬಡಕಂಬಿ,  ಹರ್ಷದ್ ಗದ್ಯಾಳ , ಸಂಜು ಕಾಂಬಳೆ, ಅಕ್ಷಯ್ ಅಸ್ಕಿ , ವಿಜಯ್ ಮಯನ್ನವರ್,  ಸುನಿತಾ ಐಹೊಳೆ ಹಾಗೂ ಸಮಸ್ತ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು