6:29 PM Sunday28 - June 2026
ಬ್ರೇಕಿಂಗ್ ನ್ಯೂಸ್
ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು…

ಇತ್ತೀಚಿನ ಸುದ್ದಿ

ಅಥಣಿ ಹಲ್ಯಾಳದಲ್ಲಿ ಸಂಭ್ರಮದ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ: ಪಲ್ಲಕ್ಕಿ ಮೆರವಣಿಗೆ

19/09/2023, 21:06

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಗ್ರಾಮದೇವತೆಯಾದ ಶ್ರೀ ಶಿವರಾಮ ಮುತ್ಯಾ ಜಾತ್ರಾ ಮಹೋತ್ಸವ ಇಂದು ವಿಜೃಂಭಣೆಯಿಂದ ಜರುಗಿತು.
ಶಿವರಾಮ ಮುತ್ಯಾ ಜಾತ್ರಾ ಮಹೋತ್ಸವದ ಅಂಗವಾಗಿ ಪ್ರವಚನ ಕಾರ್ಯಕ್ರಮವು ಜರುಗಿದವು. ಇಂದು ಮುಂಜಾನೆ ದೇವರ ಶಿವರಾಯ ಮುತ್ಯಾ ಗದ್ದುಗೆ ವಿಶೇಷ ಪೂಜೆ ಹಾಗೂ ಮಹಾಭಿಷೇಕ ಜರುಗಿತು. ನಂತರದಲ್ಲಿ ಗ್ರಾಮದ ಬೀದಿಗಳಲ್ಲಿ ಶ್ರೀ ಶಿವರಾಮ್ ಮುತ್ಯ ಪಲ್ಲಕ್ಕಿ ಮೆರವಣಿಗೆಯು ಜರಗಿತು. ನೂರಾರು ಭಕ್ತರು ಭಂಡಾರದಲ್ಲಿ ಮಿಂದೆದು ಶಿವರಾಯ ಮುತ್ಯಾ ಆಶೀರ್ವಾದಕ್ಕೆ ಪಾತ್ರರಾದರು.
ಗ್ರಾಮದ ಹೃದಯ ಭಾಗದಲ್ಲಿ ದೇವರ ಪಲ್ಲಕ್ಕಿಯನ್ನು ಇರಿಸಿ ಅಲಗ ಹಾಯುವ ಕಾರ್ಯಕ್ರಮ ಜರಗಿತು ಇದೇ ಸಂದರ್ಭದಲ್ಲಿ ಗ್ರಾಮಗಳಿಂದ ಆಗಮಿಸಿದ ಭಕ್ತರು ಶಿವರಾಯ ಮುತ್ಯಾ ದರ್ಶನ ಪಡೆದರು.


ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಚಿದಾನಂದ ಮುಕಣಿ, ಸಿದ್ದಪ್ಪಾ ಲೋಕುರ್,ಮುತ್ತಪ್ಪ ಸನದಿ, ಶಿವರಾಯ ಮಗದುಮ್ಮ, ಗುಂಡು ಹಿರೇಕುರುಬರ್, ಹಣಮಂತ ಲೋಕುರ, ತಿಪ್ಪಣ್ಣ ಹಿರೇಕುರಬರ, ಸುರೇಶ ಬಾಗಿ,ವಿನೋದ ನಾಯಿಕ, ಶ್ರೀಶೈಲ ನಾಯಿಕ ಗ್ರಾಮದ ನೂರಾರು ಭಕ್ತರು ಈ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು