12:48 PM Wednesday2 - July 2025
ಬ್ರೇಕಿಂಗ್ ನ್ಯೂಸ್
Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್…

ಇತ್ತೀಚಿನ ಸುದ್ದಿ

ಅಥಣಿ: ಪ್ರೌಢಶಾಲೆ ಬಾಲಕ ಮತ್ತು ಬಾಲಕಿಯರ ಜಿಲ್ಲಾಮಟ್ಟದ ಥ್ರೋ ಬಾಲ್ ಸ್ಪರ್ಧೆ: ಐಗಳಿ ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಗೆ ಗೆಲುವು

02/10/2024, 13:03

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಪ್ರೌಢಶಾಲೆ ಬಾಲಕ ಮತ್ತು ಬಾಲಕಿಯರ ಜಿಲ್ಲಾಮಟ್ಟದ
ಥ್ರೋ ಬಾಲ್ ಸ್ಪರ್ಧೆ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜರುಗಿತು.
ಸುಮಾರು 8 ತಾಲೂಕುಗಳಿಂದ ವಿದ್ಯಾರ್ಥಿಗಳು ಸ್ಪರ್ಧೆಗೆ ಆಗಮಿಸಿದ್ದರು. ಶಾಲೆಯಲ್ಲಿ ಶುದ್ಧ ಕುಡಿಯುವ ನೀರು ಹಾಗೂ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.
ವಿದ್ಯಾರ್ಥಿಗಳು ತುಂಬಾ ಉತ್ಸಾಹದಿಂದ ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ತಮ್ಮ ತಂಡಗಳಿಗೆ ಪ್ರೋತ್ಸಾಹಿಸಿದರು.
ಐಗಳಿ ಮತ್ತು ಮೂಡಲಗಿ ಶಾಲೆಯ ಕೊನೆಯ ರೋಚಕ ಪಂದ್ಯಾವಳಿಯಲ್ಲಿ ಐಗಳಿ ಅಪ್ಪಯ್ಯ ಸ್ವಾಮಿ ಸರ್ಕಾರಿ ಪ್ರೌಢಶಾಲೆ ಬಾಲಕಿಯರ ತಂಡವು ಜಯಶಾಲಿಯಾಯಿತು.
ಇದೇ ವೇಳೆ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ
ಎಂ. ಆರ್. ಹಲಸಂಗಿ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ, ಮಾನಸಿಕವಾಗಿ ಸದೃಢರಾಗುತ್ತಾರೆ. ಈ ದಿನ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಒಳಪಡುವ 8 ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳು ಇಂದಿನ ತ್ರೋಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು ಇದರಲ್ಲಿ ಜಯಶಾಲಿಯಾದ ತಂಡಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಲಿವೆ. ಈ ಜಿಲ್ಲಾ ಮಟ್ಟದ ಸಹಕರಿಸಿದ ಕ್ರೀಡೆಗೆ ಹಲ್ಯಾಳ ಗ್ರಾಮದ ಗ್ರಾಮಸ್ಥರಿಗೆ ಧನ್ಯವಾದ ಎಂದರು.


ಇದೇ ವೇಳೆ ಎಸ್ ಡಿಎಂಸಿ ಅಧ್ಯಕ್ಷರಾದ ದೀಪಕ್ ಮುರಗುಂಡಿ, ಚಿದಾನಂದ ಮುಕುಣಿ ಕಾಂಗ್ರೆಸ್ ಯುವ ಮುಖಂಡರು, ಮಂಜುನಾಥ ಹತ್ತಿ ಮುಖ್ಯೋಪಾಧ್ಯರು ಪ್ರಾಚಾರ್ಯರು ಜಿ ಆರ್ ಎಂ ರಾಣಘಟ್ರ ಮುಖ್ಯ ಉಪಾಧ್ಯಾಯರು ಎಸ್. ಎಸ್. ಬಳ್ಳೊಳ್ಳಿ, ಎಸ್ .ಎಂ‌.ಜನಗೌಡ, ಎಸ್. ಎಚ್. ಕೊರಬು ದೈಹಿಕ ಶಿಕ್ಷಕರು ಆರ್ ಟಿ ಬಾಗಿ, ಸರ್ಕಾರಿ ಪ್ರೌಢಶಾಲೆ ಹಲ್ಯಾಳ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕಿಯರು ವಿಧ್ಯಾರ್ಥಿಗಳು, ಹಲ್ಯಾಳದ ಗ್ರಾಮಸ್ಥರು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು