5:17 PM Tuesday13 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಅಥಣಿ: ಪ್ರೌಢಶಾಲೆ ಬಾಲಕ ಮತ್ತು ಬಾಲಕಿಯರ ಜಿಲ್ಲಾಮಟ್ಟದ ಥ್ರೋ ಬಾಲ್ ಸ್ಪರ್ಧೆ: ಐಗಳಿ ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಗೆ ಗೆಲುವು

02/10/2024, 13:03

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಪ್ರೌಢಶಾಲೆ ಬಾಲಕ ಮತ್ತು ಬಾಲಕಿಯರ ಜಿಲ್ಲಾಮಟ್ಟದ
ಥ್ರೋ ಬಾಲ್ ಸ್ಪರ್ಧೆ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜರುಗಿತು.
ಸುಮಾರು 8 ತಾಲೂಕುಗಳಿಂದ ವಿದ್ಯಾರ್ಥಿಗಳು ಸ್ಪರ್ಧೆಗೆ ಆಗಮಿಸಿದ್ದರು. ಶಾಲೆಯಲ್ಲಿ ಶುದ್ಧ ಕುಡಿಯುವ ನೀರು ಹಾಗೂ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.
ವಿದ್ಯಾರ್ಥಿಗಳು ತುಂಬಾ ಉತ್ಸಾಹದಿಂದ ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ತಮ್ಮ ತಂಡಗಳಿಗೆ ಪ್ರೋತ್ಸಾಹಿಸಿದರು.
ಐಗಳಿ ಮತ್ತು ಮೂಡಲಗಿ ಶಾಲೆಯ ಕೊನೆಯ ರೋಚಕ ಪಂದ್ಯಾವಳಿಯಲ್ಲಿ ಐಗಳಿ ಅಪ್ಪಯ್ಯ ಸ್ವಾಮಿ ಸರ್ಕಾರಿ ಪ್ರೌಢಶಾಲೆ ಬಾಲಕಿಯರ ತಂಡವು ಜಯಶಾಲಿಯಾಯಿತು.
ಇದೇ ವೇಳೆ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ
ಎಂ. ಆರ್. ಹಲಸಂಗಿ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ, ಮಾನಸಿಕವಾಗಿ ಸದೃಢರಾಗುತ್ತಾರೆ. ಈ ದಿನ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಒಳಪಡುವ 8 ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳು ಇಂದಿನ ತ್ರೋಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು ಇದರಲ್ಲಿ ಜಯಶಾಲಿಯಾದ ತಂಡಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಲಿವೆ. ಈ ಜಿಲ್ಲಾ ಮಟ್ಟದ ಸಹಕರಿಸಿದ ಕ್ರೀಡೆಗೆ ಹಲ್ಯಾಳ ಗ್ರಾಮದ ಗ್ರಾಮಸ್ಥರಿಗೆ ಧನ್ಯವಾದ ಎಂದರು.


ಇದೇ ವೇಳೆ ಎಸ್ ಡಿಎಂಸಿ ಅಧ್ಯಕ್ಷರಾದ ದೀಪಕ್ ಮುರಗುಂಡಿ, ಚಿದಾನಂದ ಮುಕುಣಿ ಕಾಂಗ್ರೆಸ್ ಯುವ ಮುಖಂಡರು, ಮಂಜುನಾಥ ಹತ್ತಿ ಮುಖ್ಯೋಪಾಧ್ಯರು ಪ್ರಾಚಾರ್ಯರು ಜಿ ಆರ್ ಎಂ ರಾಣಘಟ್ರ ಮುಖ್ಯ ಉಪಾಧ್ಯಾಯರು ಎಸ್. ಎಸ್. ಬಳ್ಳೊಳ್ಳಿ, ಎಸ್ .ಎಂ‌.ಜನಗೌಡ, ಎಸ್. ಎಚ್. ಕೊರಬು ದೈಹಿಕ ಶಿಕ್ಷಕರು ಆರ್ ಟಿ ಬಾಗಿ, ಸರ್ಕಾರಿ ಪ್ರೌಢಶಾಲೆ ಹಲ್ಯಾಳ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕಿಯರು ವಿಧ್ಯಾರ್ಥಿಗಳು, ಹಲ್ಯಾಳದ ಗ್ರಾಮಸ್ಥರು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು