3:05 PM Saturday17 - May 2025
ಬ್ರೇಕಿಂಗ್ ನ್ಯೂಸ್
ಆಪರೇಷನ್ ಸಿಂಧೂರ್; ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಅಂತರಾತ್ಮದ ದನಿ: ಕೇಂದ್ರ… Davanagere | ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದುರ್ಬಲ ಗ್ರಾಪಂಗಳ ದತ್ತು ಪಡೆದು ಸಮಗ್ರ ಅಭಿವೃದ್ಧಿಪಡಿಸಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ… ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ

ಇತ್ತೀಚಿನ ಸುದ್ದಿ

ಅಥಣಿ: ಪ್ರೌಢಶಾಲೆ ಬಾಲಕ ಮತ್ತು ಬಾಲಕಿಯರ ಜಿಲ್ಲಾಮಟ್ಟದ ಥ್ರೋ ಬಾಲ್ ಸ್ಪರ್ಧೆ: ಐಗಳಿ ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಗೆ ಗೆಲುವು

02/10/2024, 13:03

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಪ್ರೌಢಶಾಲೆ ಬಾಲಕ ಮತ್ತು ಬಾಲಕಿಯರ ಜಿಲ್ಲಾಮಟ್ಟದ
ಥ್ರೋ ಬಾಲ್ ಸ್ಪರ್ಧೆ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜರುಗಿತು.
ಸುಮಾರು 8 ತಾಲೂಕುಗಳಿಂದ ವಿದ್ಯಾರ್ಥಿಗಳು ಸ್ಪರ್ಧೆಗೆ ಆಗಮಿಸಿದ್ದರು. ಶಾಲೆಯಲ್ಲಿ ಶುದ್ಧ ಕುಡಿಯುವ ನೀರು ಹಾಗೂ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.
ವಿದ್ಯಾರ್ಥಿಗಳು ತುಂಬಾ ಉತ್ಸಾಹದಿಂದ ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ತಮ್ಮ ತಂಡಗಳಿಗೆ ಪ್ರೋತ್ಸಾಹಿಸಿದರು.
ಐಗಳಿ ಮತ್ತು ಮೂಡಲಗಿ ಶಾಲೆಯ ಕೊನೆಯ ರೋಚಕ ಪಂದ್ಯಾವಳಿಯಲ್ಲಿ ಐಗಳಿ ಅಪ್ಪಯ್ಯ ಸ್ವಾಮಿ ಸರ್ಕಾರಿ ಪ್ರೌಢಶಾಲೆ ಬಾಲಕಿಯರ ತಂಡವು ಜಯಶಾಲಿಯಾಯಿತು.
ಇದೇ ವೇಳೆ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ
ಎಂ. ಆರ್. ಹಲಸಂಗಿ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ, ಮಾನಸಿಕವಾಗಿ ಸದೃಢರಾಗುತ್ತಾರೆ. ಈ ದಿನ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಒಳಪಡುವ 8 ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳು ಇಂದಿನ ತ್ರೋಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು ಇದರಲ್ಲಿ ಜಯಶಾಲಿಯಾದ ತಂಡಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಲಿವೆ. ಈ ಜಿಲ್ಲಾ ಮಟ್ಟದ ಸಹಕರಿಸಿದ ಕ್ರೀಡೆಗೆ ಹಲ್ಯಾಳ ಗ್ರಾಮದ ಗ್ರಾಮಸ್ಥರಿಗೆ ಧನ್ಯವಾದ ಎಂದರು.


ಇದೇ ವೇಳೆ ಎಸ್ ಡಿಎಂಸಿ ಅಧ್ಯಕ್ಷರಾದ ದೀಪಕ್ ಮುರಗುಂಡಿ, ಚಿದಾನಂದ ಮುಕುಣಿ ಕಾಂಗ್ರೆಸ್ ಯುವ ಮುಖಂಡರು, ಮಂಜುನಾಥ ಹತ್ತಿ ಮುಖ್ಯೋಪಾಧ್ಯರು ಪ್ರಾಚಾರ್ಯರು ಜಿ ಆರ್ ಎಂ ರಾಣಘಟ್ರ ಮುಖ್ಯ ಉಪಾಧ್ಯಾಯರು ಎಸ್. ಎಸ್. ಬಳ್ಳೊಳ್ಳಿ, ಎಸ್ .ಎಂ‌.ಜನಗೌಡ, ಎಸ್. ಎಚ್. ಕೊರಬು ದೈಹಿಕ ಶಿಕ್ಷಕರು ಆರ್ ಟಿ ಬಾಗಿ, ಸರ್ಕಾರಿ ಪ್ರೌಢಶಾಲೆ ಹಲ್ಯಾಳ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕಿಯರು ವಿಧ್ಯಾರ್ಥಿಗಳು, ಹಲ್ಯಾಳದ ಗ್ರಾಮಸ್ಥರು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು