12:09 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಅಥಣಿ: ಹುಲಿ ಹುಡುಕಿಕೊಂಡು ಹೋದ ಗ್ರಾಮಸ್ಥರಿಗೆ ಸಿಕ್ಕಿದ್ದು ಕಾಡುಕೋಣ!: 4 ದಿನಗಳ ಸತತ ಕಾರ್ಯಾಚರಣೆ ಬಳಿಕ ಸೆರೆ!

25/09/2021, 14:45

ರಾಹುಲ್ ಅಥಣಿ ಬೆಳಗಾವಿ 

info.reporterkarnataka@gmail.com

ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಕಾಡು ಕೋಣವನ್ನು ಬಂಧಿಸುವಲ್ಲಿ, ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಗ್ರಾಮದಲ್ಲಿ ಕಾಡುಕೋಣ ಕಾಣಿಸಿಕೊಂಡು ಭಯ ಭೀತಿ ಉಂಟು ಮಾಡಿತ್ತು. ಸ್ಥಳಿಯರು ಹಾಗೂ ಅರಣ್ಯ ಇಲಾಖೆ ಅಧಿಕಾರಿ ನೇತೃತ್ವದಲ್ಲಿ ಕಾಡು ಕೋಣವನ್ನು ಸೆರೆಹಿಡಿಯಲಾಗಿದೆ. ಗ್ರಾಮದಲ್ಲಿ ಇತ್ತೀಚಿಗೆ ಹುಲಿ ಬಂದಿದೆಯೆಂದು ಶಂಕೆ ವ್ಯಕ್ತವಾಗಿದ್ದು, ಹುಲಿ ಹುಡುಕಾಟದಲ್ಲಿ ಕಾಡುಕೋಣ ಪತ್ತೆಯಾಗಿದೆ. ಹರಸಾಹಸಪಟ್ಟು ಗ್ರಾಮಸ್ಥರು ಅರಣ್ಯ ಸಿಬ್ಬಂದಿ ನೇತೃತ್ವದಲ್ಲಿ ಕಾಡುಕೋಣ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

1.5 ಟನ್ ತೂಕದ ಬೃಹತಾಕಾರದ ಕಾಡುಕೋಣ ಗ್ರಾಮದಲ್ಲಿ ಕಾಣಿಸಿಕೊಂಡಿತ್ತು, ಹಲವಾರು ಬೆಳೆಗಳನ್ನು ನಾಶಪಡಿಸುತ್ತಿರುವ ಹಿನ್ನೆಲೆಯಲ್ಲಿ, ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಮೈಸೂರಿನ ಮೃಗಾಲಯದ

ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಬೆಳಗಾವಿ ಅರಣ್ಯ ಇಲಾಖೆ ಅರಣ್ಯಾಧಿಕಾರಿಗಳಾದ ಅಂಥೋನಿ ಮರಿಯಪ್ಪ, ಮತ್ತು ಪ್ರಶಾಂತ್ ಗಾಣಿಗೇರ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿಗಳು ಸತತ ನಾಲ್ಕು ದಿನ ಕಾರ್ಯಾಚರಣೆ ನಡೆಸಿ ಕಾಡು ಕೋಣವನ್ನು ಸೆರೆಹಿಡಿದಿದ್ದಾರೆ. 

ಈ ಭಾಗದಲ್ಲಿ ಕಾಡುಕೋಣ ಕಾಣಿಸಿಕೊಳ್ಳುವುದು ಅಪರೂಪ. ಸುತ್ತಮುತ್ತ 100 ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಕಾಡುಕೋಣ ಕಾಣಿಸಿಸುದಿಲ್ಲ, ಖಾನಾಪುರ ಕಾಡಿನಲ್ಲಿ ಕಾಡು ಕೋಣಗಳಿವೆ, ಆದರೂ ಅಥಣಿ ತಾಲೂಕಿನ ಬಯಲುಸೀಮೆಯಲ್ಲಿ ಕಾಡುಕೋಣ ಬಂದಿರೋದು ಅಪರೂಪದ ಘಟನೆಯೆಂದು ಅಥಣಿ ಅರಣ್ಯ ಇಲಾಖೆ ಪ್ರಶಾಂತ ಗಾಣಿಗೇರ್ ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡರು. ಸದ್ಯ ಕಾಡುಕೋಣ ಆರೋಗ್ಯವಂತ ಆಗಿದೆ, ಮೈಸೂರು ಮೃಗಾಲಯಕ್ಕೆ ಕಾಡುಕೋಣವನ್ನು ರವಾನೆ ಮಾಡಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು