1:51 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಅಥಣಿ; ಕೃಷ್ಣಾ ನದಿಯಲ್ಲಿ ನೀರುಪಾಲಾಗಿದ್ದ ಬಾಲಕನ ಮೃತದೇಹ ಪತ್ತೆ; ಸ್ನಾನ ಮಾಡುವಾಗ ದುರ್ಘಟನೆ

26/10/2022, 13:09

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹುಲಗಬಾಳಿ ಗ್ರಾಮದ ಸಮೀಪ
ಕೃಷ್ಣಾ ನದಿಯಲ್ಲಿ ಸ್ನಾನ ಮಾಡುವಾಗ ನೀರು ಪಾಲಾಗಿದ್ದ ಬಾಲಕ ಕುಮಾರ್ ಸಿದ್ದಪ್ ವಾಗ್ಮೋಡೆಯ ಮೃತದೇಹ ಇಂದು ಪತ್ತೆಯಾಗಿದೆ.
ಬಾಲಕ ಹುಲಗಬಾಳಿ ಗ್ರಾಮದ ಬಿರೇಶ್ವರ ಜಾತ್ರೆಗೆ ಬಂದಿದ್ದ. ಅಲ್ಲಿ ಸ್ನಾನಕ್ಕೆಂದು ಕೃಷ್ಣಾ ನದಿಗೆ ಇಳಿದಿದ್ದ.


ಸ್ಥಳದಲ್ಲಿ ಎಸ್ ಡಿ ಆರ್ ಎಫ್ ಹಾಗೂ ತಾಲೂಕಿನ ಅಗ್ನಿ ಶಾಮಕ ಇಲಾಖೆಯ ಸಿಬ್ಬಂದಿಗಳಿಂದ ಮೃತದೇಹವನ್ನು ಹೊರತೆಗೆಯಲಾಗಿದೆ
ಮೃತ ಬಾಲಕನ ಶವ ಶೋಧ ಕಾರ್ಯಚರಣೆಯಲ್ಲಿ ಅಥಣಿ ತಾಲೂಕಿನ ಅಗ್ನಿಶಾಮಕ ಸಿಬ್ಬಂದಿಗಳಾದ ರಾಜು ತಳವಾರ, ಅನಿಲ್ ಬಡಚಿ, ನೀಲಪ್ಪ ಹಿರವಾಡೆ, ಸುರೇಶ್ ಮಾದರ, ಶಿವಾನಂದ್ ಶಿರಹಟ್ಟಿ, ಶಿವಯ್ಯ ಮಠಪತಿ ಇವರ ನೇತೃತ್ವದ ತಂಡ ಮೃತ ಬಾಲಕನ ಶವ ಪತ್ತೆ ಮಾಡಲು ಹಗಲು ರಾತ್ರಿ ಎನ್ನದೆ ಕಾರ್ಯಚರಣೆ ನಡೆಸಿದ್ದಾರೆ.
ಮಗ ಮೃತನಾಗಿದ್ದರಿಂದ ನನ್ನ ಕುಟುಂಬ ಬೀದಿಗೆ ಬಂದಿದೆ‌ ದಯವಿಟ್ಟು ಸ್ಥಳೀಯ ಶಾಸಕರುಗಳು ನನ್ನ ಕುಟುಂಬಕ್ಕೆ ಸಹಾಯ ನೀಡಬೇಕೆಂದು ಬಾಲಕನ ತಂದೆ ಈ ಸಂದರ್ಭದಲ್ಲಿ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು