10:54 PM Sunday5 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ಅಥಣಿ; ಕೃಷ್ಣಾ ನದಿಯಲ್ಲಿ ನೀರುಪಾಲಾಗಿದ್ದ ಬಾಲಕನ ಮೃತದೇಹ ಪತ್ತೆ; ಸ್ನಾನ ಮಾಡುವಾಗ ದುರ್ಘಟನೆ

26/10/2022, 13:09

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹುಲಗಬಾಳಿ ಗ್ರಾಮದ ಸಮೀಪ
ಕೃಷ್ಣಾ ನದಿಯಲ್ಲಿ ಸ್ನಾನ ಮಾಡುವಾಗ ನೀರು ಪಾಲಾಗಿದ್ದ ಬಾಲಕ ಕುಮಾರ್ ಸಿದ್ದಪ್ ವಾಗ್ಮೋಡೆಯ ಮೃತದೇಹ ಇಂದು ಪತ್ತೆಯಾಗಿದೆ.
ಬಾಲಕ ಹುಲಗಬಾಳಿ ಗ್ರಾಮದ ಬಿರೇಶ್ವರ ಜಾತ್ರೆಗೆ ಬಂದಿದ್ದ. ಅಲ್ಲಿ ಸ್ನಾನಕ್ಕೆಂದು ಕೃಷ್ಣಾ ನದಿಗೆ ಇಳಿದಿದ್ದ.


ಸ್ಥಳದಲ್ಲಿ ಎಸ್ ಡಿ ಆರ್ ಎಫ್ ಹಾಗೂ ತಾಲೂಕಿನ ಅಗ್ನಿ ಶಾಮಕ ಇಲಾಖೆಯ ಸಿಬ್ಬಂದಿಗಳಿಂದ ಮೃತದೇಹವನ್ನು ಹೊರತೆಗೆಯಲಾಗಿದೆ
ಮೃತ ಬಾಲಕನ ಶವ ಶೋಧ ಕಾರ್ಯಚರಣೆಯಲ್ಲಿ ಅಥಣಿ ತಾಲೂಕಿನ ಅಗ್ನಿಶಾಮಕ ಸಿಬ್ಬಂದಿಗಳಾದ ರಾಜು ತಳವಾರ, ಅನಿಲ್ ಬಡಚಿ, ನೀಲಪ್ಪ ಹಿರವಾಡೆ, ಸುರೇಶ್ ಮಾದರ, ಶಿವಾನಂದ್ ಶಿರಹಟ್ಟಿ, ಶಿವಯ್ಯ ಮಠಪತಿ ಇವರ ನೇತೃತ್ವದ ತಂಡ ಮೃತ ಬಾಲಕನ ಶವ ಪತ್ತೆ ಮಾಡಲು ಹಗಲು ರಾತ್ರಿ ಎನ್ನದೆ ಕಾರ್ಯಚರಣೆ ನಡೆಸಿದ್ದಾರೆ.
ಮಗ ಮೃತನಾಗಿದ್ದರಿಂದ ನನ್ನ ಕುಟುಂಬ ಬೀದಿಗೆ ಬಂದಿದೆ‌ ದಯವಿಟ್ಟು ಸ್ಥಳೀಯ ಶಾಸಕರುಗಳು ನನ್ನ ಕುಟುಂಬಕ್ಕೆ ಸಹಾಯ ನೀಡಬೇಕೆಂದು ಬಾಲಕನ ತಂದೆ ಈ ಸಂದರ್ಭದಲ್ಲಿ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು