12:24 PM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಅಥಣಿ; ಕೃಷ್ಣಾ ನದಿಯಲ್ಲಿ ನೀರುಪಾಲಾಗಿದ್ದ ಬಾಲಕನ ಮೃತದೇಹ ಪತ್ತೆ; ಸ್ನಾನ ಮಾಡುವಾಗ ದುರ್ಘಟನೆ

26/10/2022, 13:09

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹುಲಗಬಾಳಿ ಗ್ರಾಮದ ಸಮೀಪ
ಕೃಷ್ಣಾ ನದಿಯಲ್ಲಿ ಸ್ನಾನ ಮಾಡುವಾಗ ನೀರು ಪಾಲಾಗಿದ್ದ ಬಾಲಕ ಕುಮಾರ್ ಸಿದ್ದಪ್ ವಾಗ್ಮೋಡೆಯ ಮೃತದೇಹ ಇಂದು ಪತ್ತೆಯಾಗಿದೆ.
ಬಾಲಕ ಹುಲಗಬಾಳಿ ಗ್ರಾಮದ ಬಿರೇಶ್ವರ ಜಾತ್ರೆಗೆ ಬಂದಿದ್ದ. ಅಲ್ಲಿ ಸ್ನಾನಕ್ಕೆಂದು ಕೃಷ್ಣಾ ನದಿಗೆ ಇಳಿದಿದ್ದ.


ಸ್ಥಳದಲ್ಲಿ ಎಸ್ ಡಿ ಆರ್ ಎಫ್ ಹಾಗೂ ತಾಲೂಕಿನ ಅಗ್ನಿ ಶಾಮಕ ಇಲಾಖೆಯ ಸಿಬ್ಬಂದಿಗಳಿಂದ ಮೃತದೇಹವನ್ನು ಹೊರತೆಗೆಯಲಾಗಿದೆ
ಮೃತ ಬಾಲಕನ ಶವ ಶೋಧ ಕಾರ್ಯಚರಣೆಯಲ್ಲಿ ಅಥಣಿ ತಾಲೂಕಿನ ಅಗ್ನಿಶಾಮಕ ಸಿಬ್ಬಂದಿಗಳಾದ ರಾಜು ತಳವಾರ, ಅನಿಲ್ ಬಡಚಿ, ನೀಲಪ್ಪ ಹಿರವಾಡೆ, ಸುರೇಶ್ ಮಾದರ, ಶಿವಾನಂದ್ ಶಿರಹಟ್ಟಿ, ಶಿವಯ್ಯ ಮಠಪತಿ ಇವರ ನೇತೃತ್ವದ ತಂಡ ಮೃತ ಬಾಲಕನ ಶವ ಪತ್ತೆ ಮಾಡಲು ಹಗಲು ರಾತ್ರಿ ಎನ್ನದೆ ಕಾರ್ಯಚರಣೆ ನಡೆಸಿದ್ದಾರೆ.
ಮಗ ಮೃತನಾಗಿದ್ದರಿಂದ ನನ್ನ ಕುಟುಂಬ ಬೀದಿಗೆ ಬಂದಿದೆ‌ ದಯವಿಟ್ಟು ಸ್ಥಳೀಯ ಶಾಸಕರುಗಳು ನನ್ನ ಕುಟುಂಬಕ್ಕೆ ಸಹಾಯ ನೀಡಬೇಕೆಂದು ಬಾಲಕನ ತಂದೆ ಈ ಸಂದರ್ಭದಲ್ಲಿ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು