6:02 AM Saturday21 - September 2024
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,…

ಇತ್ತೀಚಿನ ಸುದ್ದಿ

ಅಥಣಿ: ಕೃಷ್ಣಾ ನದಿ ಪ್ರವಾಹ ಸಂತ್ರಸ್ತರಿಗೆ ಈಗ ಮೊಸಳೆ, ವಿಷ ಜಂತುಗಳ ಕಾಟ: ಇನ್ನೂ ಕೈಗೆಟಕದ ಪರಿಹಾರದ ಬಿಡಿಗಾಸು !

15/10/2021, 18:23

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಪ್ರವಾಹ ಪೀಡಿತ ಗ್ರಾಮಗಳಿಗೆ ಸದ್ಯ ಬೃಹದಾಕಾರದ ಮೊಸಳೆಗಳು ಬರುತ್ತಿದ್ದು, ಈ ಮೊದಲು ಜೀವ ಭಯದಿಂದ ಕೃಷ್ಣಾ ನದಿಯ ಪ್ರವಾಹದ ವೇಳೆ ತಮ್ಮ ಮನೆಗಳನ್ನು ತೊರೆದಿದ್ದ ಸಂತ್ರಸ್ತರಿಗೆ ಮತ್ತೆ  ಆತಂಕದ ಪರಿಸ್ಥಿತಿ ಎದುರಾಗಿದೆ.

ಹಲ್ಯಾಳ ಗ್ರಾಮದ ಸೇತುವೆಯ ಮೇಲೆ ನಿತ್ಯವೂ ಸಾವಿರಾರು ವಾಹನಗಳು ಓಡಾಡುತ್ತಿದ್ದರೂ ಕೂಡ ಹದಿನೈದು ಅಡಿಯಷ್ಟು ಉದ್ದದ ಮೊಸಳೆ ಜತ್ತ ಜಾಂಬೋಟಿ ಹೆದ್ದಾರಿಯಲ್ಲಿ ಪತ್ತೆಯಾಗಿತ್ತು.

ಇದರಿಂದ ಭಯಗೊಂಡ ವಾಹನ ಸವಾರರು ಕೆಲಹೊತ್ತು ಸಂಚಾರ ಸ್ಥಗಿತಗೊಳಿಸಿದ್ದರು.

ಮೊಸಳೆ ರಸ್ತೆ ದಾಟಿದ ಬಳಿಕ ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನು ಪರಿಹಾರ ವಿಳಂಬವಾಗಿದ್ದು ಬೀಳುವ ಸ್ಥಿತಿಯಲ್ಲಿ ಇರುವ ಮನೆಗಳಲ್ಲೆ ಸಂತ್ರಸ್ತರು ಜೀವ ಕೈಯಲ್ಲಿ ಹಿಡಿದುಕೊಂಡು ಬದುಕು ಸಾಗಿಸುತ್ತಿದ್ದಾರೆ.


ಕೃಷ್ಣಾ ನದಿಯಲ್ಲಿ  ನೀರಿನ ಇಳಿಮುಖವಾಗಿದ್ದರೂ ಕೂಡ ಆಗಾಗ ಕಾಣಿಸಿಕೊಳ್ಳುತ್ತಿರುವ ವಿಷ ಜಂತುಗಳು ಮತ್ತು ಬೃಹದಾಕಾರದ ಮೊಸಳೆಗಳಿಂದಾಗಿ ಪ್ರವಾಹ ಸಂತ್ರಸ್ತರು ರಾತ್ರಿ ನಿದ್ದೆ ಇಲ್ಲದೆ ದಿನ ಕಳೆಯುವಂತಾಗಿದೆ. ಸರಕಾರ ತಕ್ಷಣ ಎಚ್ಚೆತ್ತುಕೊಳ್ಳುವ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು