6:08 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಅಥಣಿ: ಕೃಷ್ಣಾ ನದಿ ಪ್ರವಾಹ ಸಂತ್ರಸ್ತರಿಗೆ ಈಗ ಮೊಸಳೆ, ವಿಷ ಜಂತುಗಳ ಕಾಟ: ಇನ್ನೂ ಕೈಗೆಟಕದ ಪರಿಹಾರದ ಬಿಡಿಗಾಸು !

15/10/2021, 18:23

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಪ್ರವಾಹ ಪೀಡಿತ ಗ್ರಾಮಗಳಿಗೆ ಸದ್ಯ ಬೃಹದಾಕಾರದ ಮೊಸಳೆಗಳು ಬರುತ್ತಿದ್ದು, ಈ ಮೊದಲು ಜೀವ ಭಯದಿಂದ ಕೃಷ್ಣಾ ನದಿಯ ಪ್ರವಾಹದ ವೇಳೆ ತಮ್ಮ ಮನೆಗಳನ್ನು ತೊರೆದಿದ್ದ ಸಂತ್ರಸ್ತರಿಗೆ ಮತ್ತೆ  ಆತಂಕದ ಪರಿಸ್ಥಿತಿ ಎದುರಾಗಿದೆ.

ಹಲ್ಯಾಳ ಗ್ರಾಮದ ಸೇತುವೆಯ ಮೇಲೆ ನಿತ್ಯವೂ ಸಾವಿರಾರು ವಾಹನಗಳು ಓಡಾಡುತ್ತಿದ್ದರೂ ಕೂಡ ಹದಿನೈದು ಅಡಿಯಷ್ಟು ಉದ್ದದ ಮೊಸಳೆ ಜತ್ತ ಜಾಂಬೋಟಿ ಹೆದ್ದಾರಿಯಲ್ಲಿ ಪತ್ತೆಯಾಗಿತ್ತು.

ಇದರಿಂದ ಭಯಗೊಂಡ ವಾಹನ ಸವಾರರು ಕೆಲಹೊತ್ತು ಸಂಚಾರ ಸ್ಥಗಿತಗೊಳಿಸಿದ್ದರು.

ಮೊಸಳೆ ರಸ್ತೆ ದಾಟಿದ ಬಳಿಕ ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನು ಪರಿಹಾರ ವಿಳಂಬವಾಗಿದ್ದು ಬೀಳುವ ಸ್ಥಿತಿಯಲ್ಲಿ ಇರುವ ಮನೆಗಳಲ್ಲೆ ಸಂತ್ರಸ್ತರು ಜೀವ ಕೈಯಲ್ಲಿ ಹಿಡಿದುಕೊಂಡು ಬದುಕು ಸಾಗಿಸುತ್ತಿದ್ದಾರೆ.


ಕೃಷ್ಣಾ ನದಿಯಲ್ಲಿ  ನೀರಿನ ಇಳಿಮುಖವಾಗಿದ್ದರೂ ಕೂಡ ಆಗಾಗ ಕಾಣಿಸಿಕೊಳ್ಳುತ್ತಿರುವ ವಿಷ ಜಂತುಗಳು ಮತ್ತು ಬೃಹದಾಕಾರದ ಮೊಸಳೆಗಳಿಂದಾಗಿ ಪ್ರವಾಹ ಸಂತ್ರಸ್ತರು ರಾತ್ರಿ ನಿದ್ದೆ ಇಲ್ಲದೆ ದಿನ ಕಳೆಯುವಂತಾಗಿದೆ. ಸರಕಾರ ತಕ್ಷಣ ಎಚ್ಚೆತ್ತುಕೊಳ್ಳುವ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು