8:26 AM Tuesday19 - May 2026
ಬ್ರೇಕಿಂಗ್ ನ್ಯೂಸ್
ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು.

ಇತ್ತೀಚಿನ ಸುದ್ದಿ

ಅಥಣಿ: ಕೃಷ್ಣಾ ನದಿ ಪ್ರವಾಹ ಸಂತ್ರಸ್ತರಿಗೆ ಈಗ ಮೊಸಳೆ, ವಿಷ ಜಂತುಗಳ ಕಾಟ: ಇನ್ನೂ ಕೈಗೆಟಕದ ಪರಿಹಾರದ ಬಿಡಿಗಾಸು !

15/10/2021, 18:23

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಪ್ರವಾಹ ಪೀಡಿತ ಗ್ರಾಮಗಳಿಗೆ ಸದ್ಯ ಬೃಹದಾಕಾರದ ಮೊಸಳೆಗಳು ಬರುತ್ತಿದ್ದು, ಈ ಮೊದಲು ಜೀವ ಭಯದಿಂದ ಕೃಷ್ಣಾ ನದಿಯ ಪ್ರವಾಹದ ವೇಳೆ ತಮ್ಮ ಮನೆಗಳನ್ನು ತೊರೆದಿದ್ದ ಸಂತ್ರಸ್ತರಿಗೆ ಮತ್ತೆ  ಆತಂಕದ ಪರಿಸ್ಥಿತಿ ಎದುರಾಗಿದೆ.

ಹಲ್ಯಾಳ ಗ್ರಾಮದ ಸೇತುವೆಯ ಮೇಲೆ ನಿತ್ಯವೂ ಸಾವಿರಾರು ವಾಹನಗಳು ಓಡಾಡುತ್ತಿದ್ದರೂ ಕೂಡ ಹದಿನೈದು ಅಡಿಯಷ್ಟು ಉದ್ದದ ಮೊಸಳೆ ಜತ್ತ ಜಾಂಬೋಟಿ ಹೆದ್ದಾರಿಯಲ್ಲಿ ಪತ್ತೆಯಾಗಿತ್ತು.

ಇದರಿಂದ ಭಯಗೊಂಡ ವಾಹನ ಸವಾರರು ಕೆಲಹೊತ್ತು ಸಂಚಾರ ಸ್ಥಗಿತಗೊಳಿಸಿದ್ದರು.

ಮೊಸಳೆ ರಸ್ತೆ ದಾಟಿದ ಬಳಿಕ ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನು ಪರಿಹಾರ ವಿಳಂಬವಾಗಿದ್ದು ಬೀಳುವ ಸ್ಥಿತಿಯಲ್ಲಿ ಇರುವ ಮನೆಗಳಲ್ಲೆ ಸಂತ್ರಸ್ತರು ಜೀವ ಕೈಯಲ್ಲಿ ಹಿಡಿದುಕೊಂಡು ಬದುಕು ಸಾಗಿಸುತ್ತಿದ್ದಾರೆ.


ಕೃಷ್ಣಾ ನದಿಯಲ್ಲಿ  ನೀರಿನ ಇಳಿಮುಖವಾಗಿದ್ದರೂ ಕೂಡ ಆಗಾಗ ಕಾಣಿಸಿಕೊಳ್ಳುತ್ತಿರುವ ವಿಷ ಜಂತುಗಳು ಮತ್ತು ಬೃಹದಾಕಾರದ ಮೊಸಳೆಗಳಿಂದಾಗಿ ಪ್ರವಾಹ ಸಂತ್ರಸ್ತರು ರಾತ್ರಿ ನಿದ್ದೆ ಇಲ್ಲದೆ ದಿನ ಕಳೆಯುವಂತಾಗಿದೆ. ಸರಕಾರ ತಕ್ಷಣ ಎಚ್ಚೆತ್ತುಕೊಳ್ಳುವ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು