1:29 PM Tuesday14 - April 2026
ಬ್ರೇಕಿಂಗ್ ನ್ಯೂಸ್
ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ…

ಇತ್ತೀಚಿನ ಸುದ್ದಿ

ಅಥಣಿ: ಮಹಾತಪಸ್ವಿ ಮರುಳ ಶಂಕರವರ ಸ್ಮರಣೋತ್ಸವ; ವಿಚಾರ ಸಂಕಿರಣ

03/09/2024, 19:50

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಶ್ರೀ ಮುರುಗೇಂದ್ರ ಶಿವಯೋಗಿ ವಿಶ್ವಾಸ ವಿದ್ಯಾಪೀಠ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪಾತ್ರ ವಿಚಾರ ಸಂಕಿರಣ ನಡೆಯಿತು.
ಇದೇ ಸಂದರ್ಭದಲ್ಲಿ ಮಹಾತಪಸ್ವಿ ಮರುಳ ಶಂಕರವರ ಸ್ಮರಣೋತ್ಸವ ಕಾರ್ಯಕ್ರಮ ನಡೆಯಲಾಯಿತು. ಇದರ ಸಾನಿಧ್ಯವನ್ನು ಸಟ್ಟರ ಮಠದ ಪೂಜ್ಯರು ನೆರವೇರಿಸಿ ಶಿಕ್ಷಣ ಮಟ್ಟವು ಇನ್ನೂ ಬೆಳೆಯಬೇಕಾಗಿದೆ ಬಾಹ್ಯವಾಗಿ ಕಲಿತು ಹಲವಾರು ಉನ್ನತ ಹುದ್ದೆಯಲ್ಲಿ ಹೋಗಿರತಕ್ಕಂತ ಜನರನ್ನ ನಾವು ತಿಳಿದುಕೊಂಡಿದ್ದೇವೆ. ಮೈಸೂರಿನ ವಿಶ್ವವಿದ್ಯಾಲಯವು ಸಾಮಾಜಿಕ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿ ತೋರಿಸಿದೆ. ದಕ್ಷಿಣ ಭಾರತದಲ್ಲಿ ಈ ವಿಶ್ವವಿದ್ಯಾಲಯ ಪ್ರಾರಂಭವಾದಾಗಿನಿಂದ ಲಕ್ಷಾಂತರ ಜನರು ಪದವಿ ಪಡೆದುಕೊಂಡು ಅಂತಾರಾಷ್ಟ್ರೀಯ ಮಟ್ಟದವರಿಗೆ ಹೋಗಿರಬಹುದು. ಎಂಜಿ ಸಿಜಿ ಮೆಮೋರಿಯಲ್ ಅಥಣಿ ತಾಲೂಕಿನಲ್ಲಿ ಸಾಕಷ್ಟು ಪ್ರಚಾರ ಮಾಡಿದ್ದು ಒಂದು ವಿಶ್ವವಿದ್ಯಾಲಯಕ್ಕೆ ಹೆಸರು ಪಡೆದುಕೊಳ್ಳುವ ಶಕ್ತಿ ಹೊಂದಿದೆ. ಅದೇ ಮಾದರಿಯಲ್ಲಿ ಮರುಳ ಶಂಕರ ದೇವರನ್ನು ನೆನೆಸಿಕೊಂಡು ಅನುಭವ ದೃಷ್ಟಿಯಲ್ಲಿ ಸಂಸ್ಥೆ ಮತ್ತು ವಿಶ್ವವಿದ್ಯಾಲಯವನ್ನು ಬಾಬುರಾವ್ ಮಹಾರಾಜರು ಹೊನವಾಡ ಪರಶುರಾಮ ಮಹಾರಾಜರು ಅಡಲಟ್ಟಿ ತಮ್ಮ ಅನುಭವದ ಮಾತುಗಳನ್ನಾಡಿದರು. ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಲ್ಲಿಕಾರ್ಜುನ್ ಕನಶೆಟ್ಟಿ ಅವರು ಸಾಹಿತ್ಯ ಮತ್ತು ವಿಶ್ವವಿದ್ಯಾಲಯ ಸಲ್ಲಿಸಿರುವ ಸೇವೆಯನ್ನು ಶ್ಲಾಘಸಿದರು.
ಎಂ.ಸಿ. ಗಂಗಾಧರ ಸ್ವಾಗತಿಸಿದರು. ಡಾ.ಬಸವರಾಜ್ ಮಠ ಇತಿಹಾಸ ಸಂಶೋಧಕರು ಪರ ಗೌಡ ಬಿರಾದರ್ ನಿವ್ರತ ಶಿಕ್ಷಕರು ಹಾಗೂ ಆದರ್ಶ ಶಿಕ್ಷಕರಾದ ಸದಾಶಿವ್ ಹೂ ಟಿ ಮಲ್ಲಿಕಾರ್ಜುನ ವಾಲಿ ಅವರನ್ನು ಸನ್ಮಾನಿಸಲಾಯಿತು. ಕರ್ನಾಟಕ ಮುಕ್ತ ವಿವಿ ರ್ಯಾಂಕ್ ವಿಜೇತರನ್ನು ಸನ್ಮಾನಿಸಲಾಯಿತು.


ಪಿಯುಸಿ, ಐಟಿಐ ಮಹಿಳಾ ವಿದ್ಯಾರ್ಥಿನಿಯರನ್ನು ಸಹ ಸನ್ಮಾನಿಸಲಾಯಿತು ಸಾಯಂಕಾಲ ಕಾರ್ಯ ಚಟುವಟಿಕೆಗಳು ಸುಗಮವಾಗಿ ನಡೆದು ಸಂಗೀತ ನಾಟಕ ನೃತ್ಯ ವಿದ್ಯಾರ್ಥಿಗಳು ನೆರವೇರಿಸಿ ಕೊಟ್ಟರು. ಈ ಕಾರ್ಯಕ್ರಮವನ್ನು ಐಟಿಐ ಪ್ರಾಚಾರ್ಯರು ಮಹಿಳಾ ಕೆಎಸ್ಒಯು ವಿಭಾಗದ ಮುಖ್ಯಸ್ಥರು ನೆರವೇರಿಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು