2:37 AM Thursday19 - September 2024
ಬ್ರೇಕಿಂಗ್ ನ್ಯೂಸ್
ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ

ಇತ್ತೀಚಿನ ಸುದ್ದಿ

ಅಥಣಿ: ಮಹಾತಪಸ್ವಿ ಮರುಳ ಶಂಕರವರ ಸ್ಮರಣೋತ್ಸವ; ವಿಚಾರ ಸಂಕಿರಣ

03/09/2024, 19:50

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಶ್ರೀ ಮುರುಗೇಂದ್ರ ಶಿವಯೋಗಿ ವಿಶ್ವಾಸ ವಿದ್ಯಾಪೀಠ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪಾತ್ರ ವಿಚಾರ ಸಂಕಿರಣ ನಡೆಯಿತು.
ಇದೇ ಸಂದರ್ಭದಲ್ಲಿ ಮಹಾತಪಸ್ವಿ ಮರುಳ ಶಂಕರವರ ಸ್ಮರಣೋತ್ಸವ ಕಾರ್ಯಕ್ರಮ ನಡೆಯಲಾಯಿತು. ಇದರ ಸಾನಿಧ್ಯವನ್ನು ಸಟ್ಟರ ಮಠದ ಪೂಜ್ಯರು ನೆರವೇರಿಸಿ ಶಿಕ್ಷಣ ಮಟ್ಟವು ಇನ್ನೂ ಬೆಳೆಯಬೇಕಾಗಿದೆ ಬಾಹ್ಯವಾಗಿ ಕಲಿತು ಹಲವಾರು ಉನ್ನತ ಹುದ್ದೆಯಲ್ಲಿ ಹೋಗಿರತಕ್ಕಂತ ಜನರನ್ನ ನಾವು ತಿಳಿದುಕೊಂಡಿದ್ದೇವೆ. ಮೈಸೂರಿನ ವಿಶ್ವವಿದ್ಯಾಲಯವು ಸಾಮಾಜಿಕ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿ ತೋರಿಸಿದೆ. ದಕ್ಷಿಣ ಭಾರತದಲ್ಲಿ ಈ ವಿಶ್ವವಿದ್ಯಾಲಯ ಪ್ರಾರಂಭವಾದಾಗಿನಿಂದ ಲಕ್ಷಾಂತರ ಜನರು ಪದವಿ ಪಡೆದುಕೊಂಡು ಅಂತಾರಾಷ್ಟ್ರೀಯ ಮಟ್ಟದವರಿಗೆ ಹೋಗಿರಬಹುದು. ಎಂಜಿ ಸಿಜಿ ಮೆಮೋರಿಯಲ್ ಅಥಣಿ ತಾಲೂಕಿನಲ್ಲಿ ಸಾಕಷ್ಟು ಪ್ರಚಾರ ಮಾಡಿದ್ದು ಒಂದು ವಿಶ್ವವಿದ್ಯಾಲಯಕ್ಕೆ ಹೆಸರು ಪಡೆದುಕೊಳ್ಳುವ ಶಕ್ತಿ ಹೊಂದಿದೆ. ಅದೇ ಮಾದರಿಯಲ್ಲಿ ಮರುಳ ಶಂಕರ ದೇವರನ್ನು ನೆನೆಸಿಕೊಂಡು ಅನುಭವ ದೃಷ್ಟಿಯಲ್ಲಿ ಸಂಸ್ಥೆ ಮತ್ತು ವಿಶ್ವವಿದ್ಯಾಲಯವನ್ನು ಬಾಬುರಾವ್ ಮಹಾರಾಜರು ಹೊನವಾಡ ಪರಶುರಾಮ ಮಹಾರಾಜರು ಅಡಲಟ್ಟಿ ತಮ್ಮ ಅನುಭವದ ಮಾತುಗಳನ್ನಾಡಿದರು. ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಲ್ಲಿಕಾರ್ಜುನ್ ಕನಶೆಟ್ಟಿ ಅವರು ಸಾಹಿತ್ಯ ಮತ್ತು ವಿಶ್ವವಿದ್ಯಾಲಯ ಸಲ್ಲಿಸಿರುವ ಸೇವೆಯನ್ನು ಶ್ಲಾಘಸಿದರು.
ಎಂ.ಸಿ. ಗಂಗಾಧರ ಸ್ವಾಗತಿಸಿದರು. ಡಾ.ಬಸವರಾಜ್ ಮಠ ಇತಿಹಾಸ ಸಂಶೋಧಕರು ಪರ ಗೌಡ ಬಿರಾದರ್ ನಿವ್ರತ ಶಿಕ್ಷಕರು ಹಾಗೂ ಆದರ್ಶ ಶಿಕ್ಷಕರಾದ ಸದಾಶಿವ್ ಹೂ ಟಿ ಮಲ್ಲಿಕಾರ್ಜುನ ವಾಲಿ ಅವರನ್ನು ಸನ್ಮಾನಿಸಲಾಯಿತು. ಕರ್ನಾಟಕ ಮುಕ್ತ ವಿವಿ ರ್ಯಾಂಕ್ ವಿಜೇತರನ್ನು ಸನ್ಮಾನಿಸಲಾಯಿತು.


ಪಿಯುಸಿ, ಐಟಿಐ ಮಹಿಳಾ ವಿದ್ಯಾರ್ಥಿನಿಯರನ್ನು ಸಹ ಸನ್ಮಾನಿಸಲಾಯಿತು ಸಾಯಂಕಾಲ ಕಾರ್ಯ ಚಟುವಟಿಕೆಗಳು ಸುಗಮವಾಗಿ ನಡೆದು ಸಂಗೀತ ನಾಟಕ ನೃತ್ಯ ವಿದ್ಯಾರ್ಥಿಗಳು ನೆರವೇರಿಸಿ ಕೊಟ್ಟರು. ಈ ಕಾರ್ಯಕ್ರಮವನ್ನು ಐಟಿಐ ಪ್ರಾಚಾರ್ಯರು ಮಹಿಳಾ ಕೆಎಸ್ಒಯು ವಿಭಾಗದ ಮುಖ್ಯಸ್ಥರು ನೆರವೇರಿಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು