12:55 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಅಥಣಿ: ಮೀನಿನ ಬಲೆಗೆ ಸಿಲುಕಿ ಮೀನುಗಾರ ದಾರುಣ ಸಾವು; ಬೆಳ್ಳಂಬೆಳಗೆ ನಡೆದ ದುರ್ಘಟನೆ

02/05/2024, 12:44

ಬೆಳಗಾವಿ(reporterkarnataka.com): ಮೀನು ಹಿಡಿಯಲು ಹೋದ ಮೀನುಗಾರರೊಬ್ಬರು ಬಲೆಗೆ ಸಿಲುಕಿ ನದಿಯಲ್ಲಿ ಮುಳುಗಿ ಜೀವ ಕಳೆದುಕೊಂಡ ಹೃದಯ ವಿದ್ರಾವಕ ಘಟನೆ ಇಂದು ಬೆಳಂ ಬೆಳಿಗ್ಗೆ ಅಥಣಿ ತಾಲೂಕಿನ
ಸತ್ತಿ ಗ್ರಾಮದಲ್ಲಿ ನಡೆದಿದೆ.
ಅಥಣಿ ತಾಲೂಕಿನ ಹಳ್ಯಾಳ ಗ್ರಾಮದ ಮಹಾಂತೇಶ ದುರ್ಗಪ್ಪ ಕರಕರಮುಂಡಿ (35) ಮೃತ ದುರ್ದೈವಿ. ಮೀನುಗಾರಿಕೆ ವೃತ್ತಿ ಮಾಡುತ್ತಿದ್ದ ಮಹಾಂತೇಶ ಅವರು ಎಂದಿನಂತೆ ಇಂದು ಬೆಳಿಗ್ಗೆ ಸತ್ತಿ ಗ್ರಾಮದ ಹೊರವಲಯದ ಕೃಷ್ಣ ನದಿಯಲ್ಲಿ ಮೀನು ಹಿಡಿಯಲು ಹೋಗಿ ಮೀನಿಗೆ ಬಲೆ ಹಾಕುವ ವೇಳೆ ಕಾಲಿಗೆ ಬಲೆ ಸಿಲುಕಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಸ್ಥಳೀಯರ ಸಹಾಯದಿಂದ ಮೃತ ದೇಹ ಹೊರತೆಗೆಯಲಾಗಿದ್ದು ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಮಹಾಂತೇಶ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು