4:05 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಅಥಣಿ: ನೀರು ಪಾಲಾದ ನಾಲ್ವರು ಸಹೋದರರ ಮೃತದೇಹ ಪತ್ತೆಗೆ ಮುಂದುವರಿದ ಶೋಧ ಕಾರ್ಯಾಚರಣೆ; ಗದ್ಗದಿತರಾದ ಸಹಾಯಕ ಕಮಿಷನರ್

29/06/2021, 15:45

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಕೃಷ್ಣಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ 4 ಮಂದಿ ಸಹೋದರರ ತಾಯಿಯ ಅಳಲನ್ನು ಕೇಳಿ ಚಿಕ್ಕೋಡಿ ಸಹಾಯಕ ಕಮಿಷನರ್ ಯವಕೀಶ ಕುಮಾರ್ ಮೌನವಾಗಿ ರೋಧಿಸಿದರು. ಈ ನಡುವೆ ಮೃತದೇಹಗಳ ಶೋಧ ಕಾರ್ಯಾಚರಣೆ ಭರದಿಂದ ಮುಂದುವರಿದಿದೆ.

ನಿನ್ನೆ ನಡೆದ ದುರ್ಘಟನೆಯಲ್ಲಿ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಒಂದೇ ಕುಟುಂಬದ 4 ಮಂದಿ ಸಹೋದರರು ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದರು.


ಚಿಕ್ಕೋಡಿಯ ಎಸಿ ಯವಕೀಶ ಕುಮಾರ್ ಅವರು ಮಡಿದ ಯುವಕರ ತಾಯಿಯ ಆಕ್ರಂಧನವನ್ನು ಕಂಡು ಕರಗಿ ಹೋದರು. ಮೃತ ಸಹೋದರರ ತಂದೆ ತಾಯಿಗೆ ಸಾಂತ್ವನ ಹೇಳಿದರು.

ಘಟನಾ ಸ್ಥಳದಲ್ಲೇ ತಹಶೀಲ್ದಾರ್ ಹಾಗೂ ಕಂದಾಯ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ. ಆದಷ್ಟು ಬೇಗ ಮೃತದೇಹಗಳ ಪತ್ತೆಗೆ ಕ್ರಮ ಕೈಗೊಳ್ಳುವಂತೆ ಕಂದಾಯ ಅಧಿಕಾರಿಗಳಿಗೆ ಎಸಿ ಸೂಚಿಸಿದರು.

ನಂತರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಯವಕೀಶ ಕುಮಾರ್, ಈಗಾಗಲೇ ಜಿಲ್ಲಾಧಿಕಾರಿಗಳ ಮುತುವರ್ಜಿಯಿಂದ ಕೊಲ್ಲಾಪುರದ ಈಜುಗಾರರನ್ನು ಸ್ಥಳದಲ್ಲಿ ಕರೆಸಲಾಗಿದ್ದು ಆದಷ್ಟು ಬೇಗ ಮೃತ ಶರೀರಗಳನ್ನು ಪತ್ತೆ ಮಾಡಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು