12:51 AM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಅಥಣಿ: ನೀರು ಪಾಲಾದ ನಾಲ್ವರು ಸಹೋದರರ ಮೃತದೇಹ ಪತ್ತೆಗೆ ಮುಂದುವರಿದ ಶೋಧ ಕಾರ್ಯಾಚರಣೆ; ಗದ್ಗದಿತರಾದ ಸಹಾಯಕ ಕಮಿಷನರ್

29/06/2021, 15:45

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಕೃಷ್ಣಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ 4 ಮಂದಿ ಸಹೋದರರ ತಾಯಿಯ ಅಳಲನ್ನು ಕೇಳಿ ಚಿಕ್ಕೋಡಿ ಸಹಾಯಕ ಕಮಿಷನರ್ ಯವಕೀಶ ಕುಮಾರ್ ಮೌನವಾಗಿ ರೋಧಿಸಿದರು. ಈ ನಡುವೆ ಮೃತದೇಹಗಳ ಶೋಧ ಕಾರ್ಯಾಚರಣೆ ಭರದಿಂದ ಮುಂದುವರಿದಿದೆ.

ನಿನ್ನೆ ನಡೆದ ದುರ್ಘಟನೆಯಲ್ಲಿ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಒಂದೇ ಕುಟುಂಬದ 4 ಮಂದಿ ಸಹೋದರರು ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದರು.


ಚಿಕ್ಕೋಡಿಯ ಎಸಿ ಯವಕೀಶ ಕುಮಾರ್ ಅವರು ಮಡಿದ ಯುವಕರ ತಾಯಿಯ ಆಕ್ರಂಧನವನ್ನು ಕಂಡು ಕರಗಿ ಹೋದರು. ಮೃತ ಸಹೋದರರ ತಂದೆ ತಾಯಿಗೆ ಸಾಂತ್ವನ ಹೇಳಿದರು.

ಘಟನಾ ಸ್ಥಳದಲ್ಲೇ ತಹಶೀಲ್ದಾರ್ ಹಾಗೂ ಕಂದಾಯ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ. ಆದಷ್ಟು ಬೇಗ ಮೃತದೇಹಗಳ ಪತ್ತೆಗೆ ಕ್ರಮ ಕೈಗೊಳ್ಳುವಂತೆ ಕಂದಾಯ ಅಧಿಕಾರಿಗಳಿಗೆ ಎಸಿ ಸೂಚಿಸಿದರು.

ನಂತರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಯವಕೀಶ ಕುಮಾರ್, ಈಗಾಗಲೇ ಜಿಲ್ಲಾಧಿಕಾರಿಗಳ ಮುತುವರ್ಜಿಯಿಂದ ಕೊಲ್ಲಾಪುರದ ಈಜುಗಾರರನ್ನು ಸ್ಥಳದಲ್ಲಿ ಕರೆಸಲಾಗಿದ್ದು ಆದಷ್ಟು ಬೇಗ ಮೃತ ಶರೀರಗಳನ್ನು ಪತ್ತೆ ಮಾಡಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು