2:28 PM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಅಥಣಿ ಪಟ್ಟಣದ ಮೂಲಭೂತ ಸಮಸ್ಯೆ: ಪುರಸಭೆ ಸದಸ್ಯರ ನಿಯೋಗ ಮುಖ್ಯಾಧಿಕಾರಿ ಭೇಟಿ; ಪ್ರತಿಭಟನೆ ಎಚ್ಚರಿಕೆ

07/12/2022, 19:47

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಪುರಸಭೆ ಸದಸ್ಯರ ನಿಯೋಗವು ಇಂದು ಅಥಣಿ ಪುರಸಭೆ ಮುಖ್ಯಾಧಿಕಾರಿ ಈರಣ್ಣಾ ದಡ್ಡಿ ಅವರನ್ನ ಭೇಟಿ ಮಾಡಿ ಅಥಣಿ ಪಟ್ಟಣದ ಸಮಸ್ಯೆಗಳ ಕುರಿತು ಚರ್ಚಿಸಿ, ನಿವಾರಣೆಯಾಗದಿದ್ದರೆ ಪ್ರತಿಭಟಣೆ ಮಾಡುವ ಎಚ್ಚರಿಕೆ ನೀಡಿದರು.
ಅಥಣಿ ಪಟ್ಟಣದ ಜೋಡು ಕೆರೆಗಳ ಅಭಿವೃದ್ಧಿ, ಪಟ್ಟಣದ ಟ್ರಾಫಿಕ್ ಸಮಸ್ಯೆ ಸೇರಿದಂತೆ ಹಲವು ವಾರ್ಡಗಳಲ್ಲಿನ ಮೂಲಭೂತ ಸೌಕರ್ಯದ ಬಗ್ಗೆ ಮುಖ್ಯಾಧಿಕಾರಿಗಳೊಂದಿಗೆ ಚರ್ಚಿಸಿ ಆದಷ್ಟು ಬೇಗ ಸಮಸ್ಯೆ ಪರಿಹರಿಸುವ ಮತ್ತು ಟೆಂಡರ್ ಪ್ರಕ್ರಿಯೆ ಕೈಗೊಳ್ಳುವಂತೆ ಆಗ್ರಹಿಸಿದರು.
ಇದೆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಮಾತನಾಡಿ, ಅಥಣಿ ಪಟ್ಟಣದ ಜೋಡು ಕೆರೆ ಅಭಿವೃದ್ಧಿಗೆ ಬಂದ ಹಣ ಹಿಂದುರುಗಿ ಹೋಗಿದೆ. ಇದಕ್ಕೆ ಅಧಿಕಾರಿಗಳ ಬೇಜವಾಬ್ದಾರಿ ಮತ್ತು ಸ್ಥಳಿಯ ಶಾಸಕರ ನಿರ್ಲಕ್ಷ ಎಂದರು.


ಇನ್ನೂ ಕಾಂಗ್ರೆಸ್ ಪಕ್ಷದಿಂದ ಕೆರೆ ಉಳಿಸಿ ಎಂಬ ಅಭಿಯಾನ ಮಾಡಲಾಗುತ್ತಿದ್ದು ಆದಷ್ಟು ಬೇಗ ಸಮಸ್ಯೆ ಪರಿಹರಿಸದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ರಾವಸಾಬ ಐಹೋಳೆ, ವಿಲಿನ್ ಯಳಮಲ್ಲೆ, ಬವರಾಜ ಹಳದಮಳ, ಮಲ್ಲು ಬುಟಾಳಿ, ರಿಯಾಜ್ ಸನದಿ ಕಾಂಗ್ರೆಸ್ ಮುಖಂಡರಾದ ರವಿ ಬಡಕಂಬಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು