3:21 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಅಥಣಿ ಪುರಸಭೆ ಅಧಿಕಾರಿಗಳ ಭಾರಿ ಎಡವಟ್ಟು: ಅತ್ತ ರಸ್ತೆಯೂ ಇಲ್ಲ, ಇತ್ತ ರೈತರಿಗೆ ಜಾಗವೂ ಇಲ್ಲ!

21/01/2022, 21:12

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಪಟ್ಟಣದ ಜಡ್ಡಿ ವರೆಗೆ ಬೈಪಾಸ್ ರಸ್ತೆ ನಿರ್ಮಿಸಲು ಅವಶ್ಯಕವಾದ ಜಮೀನನ್ನು ರೈತರಿಂದ ಸ್ವಾಧೀನಪಡಿಸಿಕೊಂಡಿದ್ದು, ಇತ್ತ ರಸ್ತೆಯು ನಿರ್ಮಿಸದೆ ಅತ್ತ ರೈತರಿಗೆ ಪರ್ಯಾಯ ಜಾಗವನ್ನೂ ಒದಗಿಸದೆ ಜಿಲ್ಲಾಡಳಿತ ಮೀನಮೇಷ ಎಣಿಸುತ್ತಿರುವ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.


2012- 13ನೇ ಸಾಲಿನಲ್ಲಿ ಕೊಡಬೇಕಾದ ಜಾಗವನ್ನು ಕೊಡಲು ಅಥಣಿ ಪುರಸಭೆ ಅಧಿಕಾರಿಗಳು ಮೀನಮೇಷ ಎಣಿಸುತ್ತಿದ್ದಾರೆ. 2012 -13ನೇ ಸಾಲಿನಲ್ಲಿ ಮುಖ್ಯಮಂತ್ರಿಗಳ ಸಣ್ಣ ಮತ್ತು ಮಧ್ಯಮ ಪಟ್ಟಣಗಳ ಅಭಿವೃದ್ಧಿ ಯೋಜನೆ ಕಾಮಗಾರಿ ಆಸ್ತಿ ನಂಬರ್ 2ರ ಅಥಣಿ ಪಟ್ಟಣದ ಜಡ್ಡಿ ವರೆಗೆ ಬೈಪಾಸ್ ರಸ್ತೆ ನಿರ್ಮಾಣ ನಿರ್ಮಿಸುವಲ್ಲಿ ಅವಶ್ಯಕವಾದ ರೈತರ ಜಮೀನನ್ನು ಸ್ವಾಧೀನಪಡಿಸಿಕೊಂಡು ಅದರ ಬದಲಾಗಿ ರೈತರಿಗೆ ಬೇರೆ ಜಾಗವನ್ನ ಹಸ್ತಾಂತರಿಸಬೇಕಾಗಿತ್ತು. ಈ ಕುರಿತಾಗಿ ದಿನಾಂಕ 09/11/2016 ರ ಅಥಣಿ ಪುರಸಭೆ ಕಾರ್ಯಾಲಯದಲ್ಲಿ ನಡೆದ ಸಾಮಾನ್ಯಸಭೆಯಲ್ಲಿ ಠರಾವು ಪಾಸ್ ಮಾಡಲಾಗಿತ್ತು.

ಅಂದಿನ ಪುರಸಭೆ ಮುಖ್ಯ ಅಧಿಕಾರಿ ಎಸ್. ಎ. ಕೌಲಾಪುರ ಜಾಗವನ್ನು ನೀಡುವ ಭರವಸೆಯನ್ನು ಕೂಡ ನೀಡಿದ್ದರು. ಆದರೆ ಅಧಿಕೃತವಾಗಿ

ಫಾರ್ಮ್ ನಂ.9 ಇನ್ನು ನೀಡಿಲ್ಲ. ಇದ್ದ ಅಲ್ಪ ಜಮೀನಿನಲ್ಲಿ ಹೇಗೋ ಜೀವನ ಸಾಗಿಸುತ್ತಿದ್ದೆ ಅದನ್ನು ಕಸಿದುಕೊಂಡು ನಮ್ಮನ್ನ ಬೀದಿಗೆ ಬಿಟ್ಟಿದ್ದಾರೆ ಎಂದು ರೈತರು ಗೋಳು ಹೇಳಿಕೊಳ್ಳುತ್ತಿದ್ದಾರೆ.

ಇದ್ದೆರಡು ಮಕ್ಕಳು ನಮ್ಮನ್ನಗಲಿದರು. ಚಿಕ್ಕ ಚಿಕ್ಕ ಮೊಮ್ಮಕಳನ್ನ ಕರೆದುಕೊಂಡು ಜೀವನ ಸಾಗಿಸಲು ಬಹಳ ಕಷ್ಟವಾಗುತ್ತಿದೆ. ಕೂಡಲೇ ಎಚ್ಚೆತ್ತುಕೊಂಡು ಸ್ಥಳೀಯ ಶಾಸಕರು ಸಂಬಂಧಪಟ್ಟ ಅಧಿಕಾರಿಗಳು ನಮಗೆ ನ್ಯಾಯ ಕೊಡಿಸಬೇಕೆಂದು ನೊಂದ ರೈತ ಸಿದ್ದಪ್ಪ ಕಳಸಗೊಂಡ ತಮ್ಮ ಅಳಲನ್ನ ತೋಡಿಕೊಂಡಿದ್ದಾರೆ.


ಈ ಕುರಿತು ಧ್ವನಿ ಎತ್ತಿದ ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯರಾದ ರಾಜಕುಮಾರ ಜಂಬಗಿ ಅತ್ತ ರಸ್ತೆಯು ಅರ್ಧಕ್ಕೆ ನಿಂತಿದೆ. ಇತ್ತ ರೈತರಿಗೆ ಒದಗಿಸಬೇಕಾದ ಜಾಗವನ್ನ ಕೊಟ್ಟಿಲ್ಲ. ರಸ್ತೆ ಅರ್ಧಕ್ಕೆ ನಿಂತ ಕಾರಣ ಜನರಿಗೆ ತುಂಬಾ ತೊಂದರೆ ಆಗುತ್ತಿದ್ದೂ ಅಥಣಿ ಪುರಸಭೆ ಅಧಿಕಾರಿಗಳು ಎಚೆತ್ತುಕೊಂಡು ಬೇಗ ಕೂಟ್ಟ ಮಾತಿನಂತೆ ನಡೆದುಕೊಳ್ಳಿ. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು