1:31 PM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ…

ಇತ್ತೀಚಿನ ಸುದ್ದಿ

ಅಥಣಿ ಶಾಸಕ ಲಕ್ಷ್ಮಣ ಸವದಿಗೆ ಶ್ರೀ ಮರುಳ ಸಿದ್ದ ಮಹಾಸ್ವಾಮಿ ಸನ್ಮಾನ: ಸಚಿವ ಸ್ಥಾನ ದೊರಕಲು ಆಶೀರ್ವಾದ

03/06/2023, 21:03

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಆಡಳಿತ ಕಾಂಗ್ರೆಸ್ ಪಕ್ಷದಿಂದ ನೂತನ ಶಾಸಕರಾಗಿ ಆಯ್ಕೆಯಾದ ಲಕ್ಷ್ಮಣ ಸವದಿ ಅವರಿಗೆ ಇಂದು ಅಥಣಿ ತಾಲೂಕಿನ ಶೆಟ್ಟರ್ ಮಠದ ಆವರಣದಲ್ಲಿ ಇಂದು ಶ್ರೀ ಮರುಳ ಸಿದ್ದ ಮಹಾಸ್ವಾಮಿಜಿ ಅವದು ಸನ್ಮಾನಿಸಿ ಗೌರವಿಸಿದರು.

ಈ ವೇಳೆ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಅವರು, ಇಡೀ ರಾಜ್ಯದಲ್ಲಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿ ರಾಜ್ಯದಲ್ಲಿ ಎರಡನೆ ಸ್ಥಾನದಲ್ಲಿ ಗುರುತಿಸಿ ಕೊಟ್ಟಿರುವ ಅಥಣಿ ತಾಲೂಕಿನ ಮಹಾ ಜನತೆ ಹಾಗೂ ಪೂಜ್ಯರುಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿಯ ಕೆಲಸಗಳನ್ನ ಮಾಡುವದಿದ್ದು ಬರುವ ಸಂದರ್ಭದಲ್ಲಿ ತಮ್ಮೆಲ್ಲರ ಸಹಾಯ ಮತ್ತು ಸಹಕಾರ ನನಗೆ ಯಾವತ್ತೂ ಬೇಕು ಒಟ್ಟಿಗೆ ಸೇರಿ ಕ್ಷೇತ್ರವನ್ನು ಅಭಿವೃದ್ಧಿಯ ಪಥದತ್ತ ಸಾಗಿಸೋಣ ಎಂದು ಹೇಳಿದರು.
ಆಶೀರ್ವಚನ ನೀಡಿದ ಶೆಟ್ಟರ ಮಠದ ಶ್ರೀ ಮರುಳ ಶಿದ್ದ ಮಹಾಸ್ವಾಮಿಜಿಯವರೂ ತಾವು ಅಥಣಿ ಮತಕ್ಷೇತ್ರದಲ್ಲಿ ಹಲವು ಬಾರಿ ಜಯಶಾಲಿಯಾಗಿ ಒಳ್ಳೆ ರೀತಿಯಲ್ಲಿ ಕ್ಷೇತ್ರದ ಸೇವೆಯನ್ನು ಮಾಡಿದ್ದೀರಿ. ಮತ್ತೆ ನಿಮಗೆ ಶಿವಯೋಗಿಗಳ ಆಶೀರ್ವಾದ ದೊರಕಿದೆ. ಬರುವ ದಿನಗಳಲ್ಲಿ ತಮಗೆ ಮಂತ್ರಿ ಸ್ಥಾನ ದೊರಕಲಿ ಎಂದು ಆಶೀರ್ವದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು